ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.



ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm