ಬ್ರೇಕಿಂಗ್ ನ್ಯೂಸ್
08-10-20 04:18 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 08: ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೀಷಾ ವಾಲ್ಮೀಕಿಗೆ ನ್ಯಾಯ ಕೊಡಲು ಅಸಮರ್ಥರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಖಾವಿ ಹಾಕಲು ಅಯೋಗ್ಯರಾಗಿದ್ದಾರೆ ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕಿಡಿಕಾರಿದ್ದಾರೆ.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳೂರು ವಿದಾನಸಭಾ ಕ್ಷೇತ್ರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ, ರೈತವಿರೋಧಿ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಗುರುವಾರ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.
ಹತ್ರಾಸ್ ಅತ್ಯಾಚಾರ ಘಟನೆಯ ಕುರಿತಂತೆ ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರು ಹಲ್ಲೆಗೆ ಮುಂದಾಗಿದ್ದರು. ಹತ್ರಾಸ್ ಘಟನೆಯಲ್ಲಿ ಮಾಧ್ಯಮದ ಹಕ್ಕನ್ನು ಕಸಿಯುವ ಕಾರ್ಯವೂ ಯೋಗಿ ಸರಕಾರದಿಂದ ನಡೆದಿದೆ. ಉತ್ತರ ಪ್ರದೇಶ ಎಂಬ ರಾಜ್ಯ ಭಾರತ ದೇಶದಲ್ಲಿ ಇದೆ ಎನ್ನುವುದಕ್ಕೆ ನಾಚಿಕೆ ಪಡುವ ಸ್ಥಿತಿ ಎದುರಾಗಿದ್ದು, ಯೋಗಿ ಆದಿತ್ಯನಾಥ್ ಮಂಗಳೂರಿಗೆ ಕಾಲಿಟ್ಟರೆ ಅವರಿಗೆ ಕಪ್ಪು ಮಸಿ ಬಳಿಯುವ ಕಾರ್ಯ ಯೂತ್ ಕಾಂಗ್ರೆಸ್ ನಡೆಸುತ್ತೆ ಎಂದು ಎಚ್ಚರಿಸಿದರು.
ಇಷ್ಟೆಲ್ಲ ಆದರೂ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ಸರ್ವಾಧಿಕಾರಿ ಧೋರಣೆಗೆ ಜೀವಂತ ಉದಾಹರಣೆ ಮೋದಿ. ಹಿಟ್ಲರ್ ನಂತರ ನಮ್ಮ ದೇಶದ ಮೋದಿ ಸರ್ವಾಧಿಕಾರಿ ಆಗಿದ್ದಾರೆ. ಇಂದಿರಾ ಗಾಂಧಿಯವರು ಉಳುವವನೇ ಒಡೆಯನೆಂಬ ಕಾನೂನು ಜಾರಿ ಮಾಡಿದರೆ, ಉಳ್ಳವನೇ ಭೂಮಿಯ ಒಡೆಯ ಎಂಬ ನೀತಿ ಜಾರಿ ಮಾಡಿ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಕೇಂದ್ರ ಸರಕಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಹತ್ರಾಸ್ ಅತ್ಯಾಚಾರ ಘಟನೆಯನ್ನು ಕಂಡ ದೇಶದ ಮಹಿಳೆಯರು ಕಣ್ಣಿಗೆ ಬಟ್ಟೆ ಕಟ್ಟಿ ಕುಳಿತಿದ್ದಾರೆ. ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಬೇಕು. ಅತ್ಯಾಚಾರಿಗಳನ್ನು ಸಾರ್ವಜನಿಕ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.
ಇಂಟಕ್ ರಾಷ್ಟ್ರೀಯ ಪ್ರ.ಕಾ. ರಾಕೇಶ್ ಮಲ್ಲಿ, ಮುಖಂಡರಾದ ದಿನಕರ್ ಶೆಟ್ಟಿ, ಮನೋಹರ್ ಶೆಟ್ಟಿ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಎನ್.ಎಸ್ ಕರೀಂ, ಮಹಮ್ಮದ್ ಮುಸ್ತಾಫ ಹರೇಕಳ,ಪದ್ಮನಾಭ ನರಿಂಗಾನ, ತಾ.ಪಂ ಸದಸ್ಯೆ ಸುರೇಖ ಚಂದ್ರಹಾಸ್ ,ಮಾಜಿ ಉಳ್ಳಾಲ ನಗರ ಸದಸ್ಯ ದಿನೇಶ್ ರೈ ಮೊದಲಾದವರು ಇದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm