ಬ್ರೇಕಿಂಗ್ ನ್ಯೂಸ್
08-10-20 04:18 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 08: ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೀಷಾ ವಾಲ್ಮೀಕಿಗೆ ನ್ಯಾಯ ಕೊಡಲು ಅಸಮರ್ಥರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಖಾವಿ ಹಾಕಲು ಅಯೋಗ್ಯರಾಗಿದ್ದಾರೆ ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕಿಡಿಕಾರಿದ್ದಾರೆ.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳೂರು ವಿದಾನಸಭಾ ಕ್ಷೇತ್ರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ, ರೈತವಿರೋಧಿ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಗುರುವಾರ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.
ಹತ್ರಾಸ್ ಅತ್ಯಾಚಾರ ಘಟನೆಯ ಕುರಿತಂತೆ ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರು ಹಲ್ಲೆಗೆ ಮುಂದಾಗಿದ್ದರು. ಹತ್ರಾಸ್ ಘಟನೆಯಲ್ಲಿ ಮಾಧ್ಯಮದ ಹಕ್ಕನ್ನು ಕಸಿಯುವ ಕಾರ್ಯವೂ ಯೋಗಿ ಸರಕಾರದಿಂದ ನಡೆದಿದೆ. ಉತ್ತರ ಪ್ರದೇಶ ಎಂಬ ರಾಜ್ಯ ಭಾರತ ದೇಶದಲ್ಲಿ ಇದೆ ಎನ್ನುವುದಕ್ಕೆ ನಾಚಿಕೆ ಪಡುವ ಸ್ಥಿತಿ ಎದುರಾಗಿದ್ದು, ಯೋಗಿ ಆದಿತ್ಯನಾಥ್ ಮಂಗಳೂರಿಗೆ ಕಾಲಿಟ್ಟರೆ ಅವರಿಗೆ ಕಪ್ಪು ಮಸಿ ಬಳಿಯುವ ಕಾರ್ಯ ಯೂತ್ ಕಾಂಗ್ರೆಸ್ ನಡೆಸುತ್ತೆ ಎಂದು ಎಚ್ಚರಿಸಿದರು.
ಇಷ್ಟೆಲ್ಲ ಆದರೂ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ಸರ್ವಾಧಿಕಾರಿ ಧೋರಣೆಗೆ ಜೀವಂತ ಉದಾಹರಣೆ ಮೋದಿ. ಹಿಟ್ಲರ್ ನಂತರ ನಮ್ಮ ದೇಶದ ಮೋದಿ ಸರ್ವಾಧಿಕಾರಿ ಆಗಿದ್ದಾರೆ. ಇಂದಿರಾ ಗಾಂಧಿಯವರು ಉಳುವವನೇ ಒಡೆಯನೆಂಬ ಕಾನೂನು ಜಾರಿ ಮಾಡಿದರೆ, ಉಳ್ಳವನೇ ಭೂಮಿಯ ಒಡೆಯ ಎಂಬ ನೀತಿ ಜಾರಿ ಮಾಡಿ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಕೇಂದ್ರ ಸರಕಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಹತ್ರಾಸ್ ಅತ್ಯಾಚಾರ ಘಟನೆಯನ್ನು ಕಂಡ ದೇಶದ ಮಹಿಳೆಯರು ಕಣ್ಣಿಗೆ ಬಟ್ಟೆ ಕಟ್ಟಿ ಕುಳಿತಿದ್ದಾರೆ. ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಬೇಕು. ಅತ್ಯಾಚಾರಿಗಳನ್ನು ಸಾರ್ವಜನಿಕ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.
ಇಂಟಕ್ ರಾಷ್ಟ್ರೀಯ ಪ್ರ.ಕಾ. ರಾಕೇಶ್ ಮಲ್ಲಿ, ಮುಖಂಡರಾದ ದಿನಕರ್ ಶೆಟ್ಟಿ, ಮನೋಹರ್ ಶೆಟ್ಟಿ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಎನ್.ಎಸ್ ಕರೀಂ, ಮಹಮ್ಮದ್ ಮುಸ್ತಾಫ ಹರೇಕಳ,ಪದ್ಮನಾಭ ನರಿಂಗಾನ, ತಾ.ಪಂ ಸದಸ್ಯೆ ಸುರೇಖ ಚಂದ್ರಹಾಸ್ ,ಮಾಜಿ ಉಳ್ಳಾಲ ನಗರ ಸದಸ್ಯ ದಿನೇಶ್ ರೈ ಮೊದಲಾದವರು ಇದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am