ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am