ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
25-04-24 11:52 am
Udupi Correspondent
Brijesh Chowta, Mangalore: ಕಾಂಗ್ರೆಸಿಗೆ ಮತ ನೀಡ...
24-04-24 10:39 pm
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
25-04-24 12:19 pm
Bangalore Correspondent
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm