ಬ್ರೇಕಿಂಗ್ ನ್ಯೂಸ್
19-09-22 02:01 pm Mangalore Correspondent ಕರಾವಳಿ
ಮಂಗಳೂರು, ಸೆ.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಅ.6ರ ವರೆಗೆ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ದಸರಾ ಮಹೋತ್ಸವ ಕುರಿತು ಭಾನುವಾರ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ನಡೆಸಲಾಗಿದ್ದು ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗುವುದು. ಆಮಂತ್ರಣ ಪತ್ರಿಕೆಯನ್ನು ಅವರಿಗೆ ಕಳುಹಿಸಿ ಕೊಟ್ಟು ಸ್ವತಃ ನಾನೇ ಆಹ್ವಾನಿಸುತ್ತೇನೆ. ಅವರ ಸಮಯ ಗೊತ್ತುಪಡಿಸಿ ಉದ್ಘಾಟನೆ ನಿಗದಿ ಪಡಿಸಲಾಗುವುದು ಎಂದು ಪೂಜಾರಿ ತಿಳಿಸಿದ್ದಾರೆ.


ಮಂಗಳೂರು ದಸರಾಕ್ಕೆ ದೂರದ ಊರುಗಳಿಂದ 10 ಲಕ್ಷಕ್ಕೂ ಅಧಿಕ ಮಂದಿ ಬರಲಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಿದ್ಧತೆಯನ್ನೂ ಮಾಡಲಾಗುತ್ತಿದೆ. ಪ್ರತೀ ದಿನ ಧಾರ್ಮಿಕ ಸೇವೆಗಳ ಜತೆಗೆ ಅನ್ನದಾನ ಇರಲಿದೆ. ಭಕ್ತರ ಅನುಕೂಲಕ್ಕಾಗಿ ಈ ಬಾರಿ ಚಂಡಿಕಾ ಯಾಗವನ್ನು ದೇವಸ್ಥಾನದ ಹಿಂಬದಿಯ ಗಾಜಿನ ಮನೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.


ಶಾರದೆಗೆ 12 ಕೆಜಿ ತೂಕದ ರಜತಪೀಠ
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಮಂಗಳೂರು ದಸರಾದ ಶಾರದೆಗೆ ಈ ಬಾರಿ 12 ಲಕ್ಷ ರೂ. ವೆಚ್ಚದಲ್ಲಿ 12 ಕೆ.ಜಿ. ತೂಕದ ರಜತ ಪೀಠವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ ಮತ್ತು ಭಕ್ತರ ಸೇವೆಯಾಗಿ ಪುತ್ತೂರಿನಲ್ಲಿ ನಿರ್ಮಿಸಲಾಗುತ್ತಿದೆ. ಸೆ. 24ರಂದು ಇದನ್ನು ಕ್ಷೇತ್ರದಲ್ಲಿ ಸಮರ್ಪಣೆ ಮಾಡಲಾಗುವುದು. ಭಕ್ತರೊಬ್ಬರು ಬೆಳ್ಳಿ ವೀಣೆಯನ್ನು ಕಾಣಿಕೆಯಾಗಿ ನೀಡಲಿದ್ದಾರೆ ಎಂದರು.

ಮೇಯರ್ ಜಯಾನಂದ ಅಂಚನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ರಮಾನಾಥ್ ಕಾರಂದೂರು, ಶೈಲೇಂದ್ರ ವೈ. ಸುವರ್ಣ, ಎಚ್.ಎಸ್. ಜಯರಾಜ್, ಕೃತಿನ್ ಡಿ. ಅಮೀನ್, ಚಂದನ್ದಾಸ್ ಮೊದಲಾದವರು ಸಭೆಯಲ್ಲಿದ್ದರು.
Mangalore Kudroli dasara to be held from September 6th to October 6th, CM Bommai invited for inauguration said B. Janardhana Poojary.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm