ಬ್ರೇಕಿಂಗ್ ನ್ಯೂಸ್
19-09-22 02:01 pm Mangalore Correspondent ಕರಾವಳಿ
ಮಂಗಳೂರು, ಸೆ.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಅ.6ರ ವರೆಗೆ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ದಸರಾ ಮಹೋತ್ಸವ ಕುರಿತು ಭಾನುವಾರ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ನಡೆಸಲಾಗಿದ್ದು ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗುವುದು. ಆಮಂತ್ರಣ ಪತ್ರಿಕೆಯನ್ನು ಅವರಿಗೆ ಕಳುಹಿಸಿ ಕೊಟ್ಟು ಸ್ವತಃ ನಾನೇ ಆಹ್ವಾನಿಸುತ್ತೇನೆ. ಅವರ ಸಮಯ ಗೊತ್ತುಪಡಿಸಿ ಉದ್ಘಾಟನೆ ನಿಗದಿ ಪಡಿಸಲಾಗುವುದು ಎಂದು ಪೂಜಾರಿ ತಿಳಿಸಿದ್ದಾರೆ.


ಮಂಗಳೂರು ದಸರಾಕ್ಕೆ ದೂರದ ಊರುಗಳಿಂದ 10 ಲಕ್ಷಕ್ಕೂ ಅಧಿಕ ಮಂದಿ ಬರಲಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಿದ್ಧತೆಯನ್ನೂ ಮಾಡಲಾಗುತ್ತಿದೆ. ಪ್ರತೀ ದಿನ ಧಾರ್ಮಿಕ ಸೇವೆಗಳ ಜತೆಗೆ ಅನ್ನದಾನ ಇರಲಿದೆ. ಭಕ್ತರ ಅನುಕೂಲಕ್ಕಾಗಿ ಈ ಬಾರಿ ಚಂಡಿಕಾ ಯಾಗವನ್ನು ದೇವಸ್ಥಾನದ ಹಿಂಬದಿಯ ಗಾಜಿನ ಮನೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.


ಶಾರದೆಗೆ 12 ಕೆಜಿ ತೂಕದ ರಜತಪೀಠ
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಮಂಗಳೂರು ದಸರಾದ ಶಾರದೆಗೆ ಈ ಬಾರಿ 12 ಲಕ್ಷ ರೂ. ವೆಚ್ಚದಲ್ಲಿ 12 ಕೆ.ಜಿ. ತೂಕದ ರಜತ ಪೀಠವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ ಮತ್ತು ಭಕ್ತರ ಸೇವೆಯಾಗಿ ಪುತ್ತೂರಿನಲ್ಲಿ ನಿರ್ಮಿಸಲಾಗುತ್ತಿದೆ. ಸೆ. 24ರಂದು ಇದನ್ನು ಕ್ಷೇತ್ರದಲ್ಲಿ ಸಮರ್ಪಣೆ ಮಾಡಲಾಗುವುದು. ಭಕ್ತರೊಬ್ಬರು ಬೆಳ್ಳಿ ವೀಣೆಯನ್ನು ಕಾಣಿಕೆಯಾಗಿ ನೀಡಲಿದ್ದಾರೆ ಎಂದರು.

ಮೇಯರ್ ಜಯಾನಂದ ಅಂಚನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ರಮಾನಾಥ್ ಕಾರಂದೂರು, ಶೈಲೇಂದ್ರ ವೈ. ಸುವರ್ಣ, ಎಚ್.ಎಸ್. ಜಯರಾಜ್, ಕೃತಿನ್ ಡಿ. ಅಮೀನ್, ಚಂದನ್ದಾಸ್ ಮೊದಲಾದವರು ಸಭೆಯಲ್ಲಿದ್ದರು.
Mangalore Kudroli dasara to be held from September 6th to October 6th, CM Bommai invited for inauguration said B. Janardhana Poojary.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am