ಬ್ರೇಕಿಂಗ್ ನ್ಯೂಸ್
19-09-22 10:13 pm Mangalore Correspondent ಕರಾವಳಿ
ಪುತ್ತೂರು, ಸೆ.19 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಚಲನ ಎಬ್ಬಿಸಿದ ಸಂದರ್ಭದಲ್ಲಿ ಬೆಳ್ಳಾರೆಗೆ ಹೊರಟಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಥಳಕ್ಕೆ ಬರಲು ಮುಂದಾಗಿದ್ದರು. ಆದರೆ ಶಾಂತಿ ಕದಡುವ ನೆಪದಲ್ಲಿ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧ ತೆರವಾಗುತ್ತಿದ್ದಂತೆ ಸೋಮವಾರ ಮುತಾಲಿಕ್ ಪ್ರವೀಣ್ ಮನೆಗೆ ಭೇಟಿಯಿತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ಮುತಾಲಿಕ್ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತರಿಗೆ ಗಲ್ಲು ಶಿಕ್ಷೆ ನೀಡಬೇಕು. ಒಂದು ವರ್ಷದೊಳಗೆ ಕೊಲೆಗಡುಕರನ್ನು ನೇಣಿಗೆ ಹಾಕಬೇಕು. ಇದೇ ರಾಜ್ಯ ಸರಕಾರ ಪ್ರವೀಣ್ ನೆಟ್ಟಾರು ಅವರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ. ಎನ್ಐಎ ಇನ್ನೊಂದು ತನಿಖೆ ಮಾಡಿದ ಮಾತ್ರಕ್ಕೆ ನ್ಯಾಯ ಸಿಗುವುದಿಲ್ಲ. ಪ್ರವೀಣ್ ನೆಟ್ಟಾರ್ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ಆಗುವ ವರೆಗೂ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.


ಮೃತ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸರಕಾರ ನೀಡಿದ ಭರವಸೆ ಈಡೇರಿಸಬೇಕು. ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆ ಮುಖ್ಯಮಂತ್ರಿ ನೀಡಿದ್ದಾರೆ. ಕೂಡಲೇ ಭರವಸೆಯಂತೆ ಆದೇಶ ಹೊರಡಿಸಬೇಕು. ಆಶ್ವಾಸನೆ ಈಡೇರಿಸದಿದ್ದರೆ ಸಿಎಂ ಮನೆ ಮುಂದೆ ಧರಣಿ ನಡೆಸುತ್ತೇವೆ. ಮಾತು ತಪ್ಪಿದರೆ ಸಿಎಂ ಮುಖಕ್ಕೆ ಮಸಿ ಬಳಿಯುವುದಕ್ಕೂ ಹೇಸುವುದಿಲ್ಲ ಎಂದು ಮುತಾಲಿಕ್ ಎಚ್ಚರಿಸಿದರು.

ಪ್ರವೀಣ್ ಹತ್ಯೆ ಹೆಣ್ಣು, ಹೊನ್ನು ಅಥವಾ ಇನ್ನಾವುದೇ ದ್ವೇಷಕ್ಕಾಗಿ ನಡೆದಿಲ್ಲ. ಹಿಂದುತ್ವದ ಪರ ಇದ್ದಾನೆ, ಸಮಾಜದಲ್ಲಿ ಸಂಘಟನೆ ನಡೆಸುತ್ತಾನೆ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡಿ ಕೊಂದಿದ್ದಾರೆ. ಇಂಥ ಇಸ್ಲಾಮಿಕ್ ಗೂಂಡಾಗಳನ್ನು ಭಾರತ ನೆಲದ ಮೇಲಿರಲು ಅವಕಾಶ ನೀಡಬಾರದು. ಇಂತಹ ರಾಕ್ಷಸರ ಕುಲವನ್ನು ಸರ್ವನಾಶ ಮಾಡುವವರೆಗೂ ಬಿಡುವುದಿಲ್ಲ. ಇವರ ಇಂಥ ಮಾನಸಿಕತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ. ಹಿಂದು ಸಮಾಜ ಈಗ ಜಾಗೃತವಾಗಿದೆ. ಇಂಥ ಕೃತ್ಯಕ್ಕೆ ಸೂಕ್ತ ಉತ್ತರ ನೀಡುತ್ತದೆ ಎಂದರು.

ಪ್ರವೀಣ್ ನೆಟ್ಟಾರು ಪ್ರಕರಣದ ಕೊಲೆಗಡುಕರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ಕೊಟ್ಟರೆ ಹಿಂದು ಸಮಾಜ ಹಾಗೇ ಬಿಡುವುದಿಲ್ಲ. ಕೊಲೆ ಗಡುಕರಿಗೆ ಯಾವುದೇ ಪರಿಸ್ಥಿತಿಯಲ್ಲಿ ಜಾಮೀನು ಆಗದಂತೆ ಸರಕಾರ ಜವಾಬ್ದಾರಿ ವಹಿಸಬೇಕು. ಇಂಥ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ನಮಗೆ ಎನ್ಐಎ ತನಿಖೆಯ ಮೇಲೆ ಭರವಸೆ ಇಲ್ಲ. ಹಿಂದೆ ಎನ್ಐಎ ನಡೆಸಿದ ತನಿಖೆಯಿಂದ ಏನೂ ಆಗಿಲ್ಲ. ಕೂಡಲೇ ಹಂತಕರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಹೇಳಿದರು.
If Praveen Nettaru doesn't get job in CMs office throw ink on Bommais face says Pramod Muthalik.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am