ಬ್ರೇಕಿಂಗ್ ನ್ಯೂಸ್
08-10-20 05:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 08: ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಯೋಜನಾ ವೆಚ್ಚವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಯೋಜನೆಯಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಮಾಜಿ ಎಂಎಲ್ಸಿ, ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಎರಡು ವರ್ಷ ಕಳೆದರೂ ಸಮರ್ಪಕವಾಗಿ ನಡೆದಿಲ್ಲ. ಯೋಜನೆಯ ವೆಚ್ಚಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದ್ದು ಭಾರೀ ಅವ್ಯವಹಾರ ನಡೆದಿರುವ ಶಂಕೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ ಅನುದಾನವನ್ನು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ವಿಂಗಡಿಸಿ ನೀಡಲಾಗುತ್ತಿದೆ. ಮೂಡಾ ವ್ಯಾಪ್ತಿಯ ಎಂಟು ಕೆರೆಗಳ ಅಭಿವೃದ್ಧಿಗೆ ಎಂಟು ಕೋಟಿ ರೂ. ಮಂಜೂರಾಗಿ ಎಂಟು ತಿಂಗಳು ಕಳೆದರೂ ಕಾಮಗಾರಿ ಆರಂಭಿಸಿಲ್ಲ. ಯೋಜನೆಯ ವೆಚ್ಚಗಳ ಬಗ್ಗೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿಗೆ ವಿಧಿಸುವಂತಿಲ್ಲ. ಸರಕಾರದ ಅನುದಾನ ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಇಡೀ ಯೋಜನೆಯನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.


ಪ್ರಧಾನ ಮಂತ್ರಿ ಇಂದಿರಾ ಅವಾಝ್ ಯೋಜನೆಯ ಫಲಾನುಭವಿಗಳಿಗೆ ಎರಡು ವರ್ಷ 9 ತಿಂಗಳು ಕಳೆದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಅಧಿಕಾರಿಗಳು, ಶಾಸಕರೂ ಮುತುರ್ಜಿ ವಹಿಸುತ್ತಿಲ್ಲ. ಇದರಿಂದ ಮನೆ ಮಂಜೂರಾದ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಶಾಸಕರು ಮುತುವರ್ಜಿ ವಹಿಸಿ ಫಲಾನುಭವಿಗಳಿಗೆ ಮನೆ ಒದಗಿಸಿಕೊಡಬೇಕೆಂದು ಐವನ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ನೀರಜ್ ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Former MLC Ivan D'souza alleges scam in Mangalore Smart city project, says will report to Lokayukta tpo investigate the case
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am