ಬ್ರೇಕಿಂಗ್ ನ್ಯೂಸ್
21-09-22 10:47 pm Mangalore Correspondent ಕರಾವಳಿ
ಮಂಗಳೂರು, ಸೆ.21: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ತಂಡ ಮಂಗಳೂರಿಗೆ ಕರೆತಂದಿದ್ದು, ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ಹಾಗೂ ಆಗುಂಬೆ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡ ಮಾಝ್ ಮುನೀರನ್ನು ಕರೆತಂದು ವಿವಿಧ ಕಡೆಗಳಿಗೆ ಕರೆದೊಯ್ದು ಶೋಧ ಕಾರ್ಯ ನಡೆಸಿದೆ.
ಬುಧವಾರ ಮಧ್ಯಾಹ್ನ ಬಂಟ್ವಾಳ ತಾಲೂಕಿನ ನಾವುರ ಗ್ರಾಮದ ಸುಲ್ತಾನ್ ಕಟ್ಟೆ ಎಂಬಲ್ಲಿಗೆ ಕರೆದೊಯ್ದು ಅಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಹಜರು ವೇಳೆ ಡಾಗ್ ಸ್ಕ್ವಾಡ್ ಕೂಡ ಜೊತೆಗಿದ್ದು ಅಲ್ಲಿ ಹುದುಗಿಸಿಟ್ಟಿದ್ದಾರೆ ಎನ್ನಲಾದ ಸ್ಫೋಟಕ ವಸ್ತುಗಳ ಬಗ್ಗೆ ಹುಡುಕಾಟ ನಡೆಸಲಾಗಿದೆ. ನಾವುರ ಸಮೀಪದ ಅಗ್ರಹಾರ ಎಂಬಲ್ಲಿಯೂ ಪೊಲೀಸರು ಆರೋಪಿಯನ್ನು ಕರೆದೊಯ್ದು ಶೋಧ ನಡೆಸಿದ್ದಾರೆ. ಬಂಟ್ವಾಳ, ಮಂಗಳೂರು ತಾಲೂಕಿನ ವಿವಿಧ ಕಡೆಗಳಿಗೆ ಪೊಲೀಸರು ಆರೋಪಿ ಮಾಝ್ ನನ್ನು ಕರೆದೊಯ್ದಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳದ ಹಲವೆಡೆ ನಿರ್ಜನ ಪ್ರದೇಶದಲ್ಲಿ ಬಾಂಬ್ ಸ್ಫೋಟದ ಪ್ರಯೋಗ, ತರಬೇತಿ ನಡೆಸಿರುವ ಬಗ್ಗೆ ಮಾಝ್ ಮುನೀರ್ ಅಹ್ಮದ್ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡನ್ನು ಜೊತೆಗೆ ಕರೆದುಕೊಂಡೇ ಬಂದಿರುವ ಪೊಲೀಸರು ವಿವಿಧ ಕಡೆಗಳಿಗೆ ಕರೆದೊಯ್ದು ಸ್ಫೋಟಕ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಹಲವು ಮಹತ್ವದ ಪುರಾವೆಗಳು ಲಭಿಸಿವೆ ಎನ್ನಲಾಗುತ್ತಿದೆ.

ಮಾಝ್ ಮುನೀರ್ ಅಹ್ಮದ್ ಮಂಗಳೂರಿನಲ್ಲಿದ್ದರೆ, ಸಯ್ಯದ್ ಯಾಸೀನ್ ಶಿವಮೊಗ್ಗದಲ್ಲಿಯೇ ಇದ್ದ. ಇವರಿಬ್ಬರು ಕೂಡ ಒಂದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದರು. ಯಾಸೀನ್ ತುಂಗಭದ್ರಾ ನದಿಯ ಆಸುಪಾಸಿನಲ್ಲಿ ನಿರ್ಜನ ಪ್ರದೇಶಗಳಲ್ಲಿ ಬಾಂಬ್ ಹುದುಗಿಸಿಟ್ಟು ಸ್ಫೋಟದ ರಿಹರ್ಸಲ್ ನಡೆಸಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಆಧುನಿಕ ಮಾದರಿಯಲ್ಲಿ ಬಾಂಬ್ ತಯಾರಿಸಲು ನಿರ್ಜನ ಕಾಡು ಪ್ರದೇಶದಲ್ಲಿದ್ದುಕೊಂಡು ಇವರು ಪ್ರಯೋಗ ನಡೆಸುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಇರುವುದರಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಿವಿಧ ಕಡೆಗಳಿಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಇವರು ನೀಡಿರುವ ಮಾಹಿತಿ ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Shivamogga Terror suspect, accused brought to Bantwal in Mangalore got spot Mahajar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm