ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.










ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm