ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.










ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
27-11-25 10:23 pm
HK News Desk
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ರೆಡಿಯಾಗುತ್ತಿದ...
27-11-25 08:14 pm
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ; ಕುಟುಂಬಸ...
27-11-25 06:30 pm
ಕಾಂಗ್ರೆಸ್ ಕಚ್ಚಾಟದಲ್ಲಿ ಯಾರು ಹೊರಬಂದರೂ ಬಿಜೆಪಿ ಬೆ...
27-11-25 04:27 pm
ಹೊಸಕೋಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಭೀ...
27-11-25 12:56 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
27-11-25 09:14 pm
Mangalore Correspondent
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm