ಬ್ರೇಕಿಂಗ್ ನ್ಯೂಸ್
22-09-22 11:12 am Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರು ನಗರದಲ್ಲಿ ಎನ್ಐಎ ದಾಳಿ ಅಂತ್ಯಗೊಂಡಿದ್ದು ಹಲವು ಮಹತ್ವದ ಕಡತಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3.30ರ ವೇಳೆಗೆ ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ, ಪಿಎಫ್ಐ ಕಚೇರಿಗೆ ದಾಳಿ ನಡೆಸಿದ್ದರು. ಹತ್ತು ಗಂಟೆ ವೇಳೆಗೆ ದಾಳಿ ಕಾರ್ಯ ಮುಕ್ತಾಯಗೊಳಿಸಿದ್ದು ಅಲ್ಲಿಂದ ತೆರಳಿದ್ದಾರೆ.
ಮಾಹಿತಿ ಪ್ರಕಾರ, ಪಿಎಫ್ ಐ ರಾಜ್ಯ ಕಾರ್ಯದರ್ಶಿ ಆಗಿರುವ ಮಂಗಳೂರಿನ ಎಕೆ ಅಶ್ರಫ್, ಪಿಎಫ್ಐ ಗ್ರಾಮಾಂತರ ಜಿಲ್ಲಾಧ್ಯಕ್ಷ ನವಾಜ್ ಕಾವೂರು, ಪಿಎಫ್ಐ ರಾಜ್ಯ ಸಮಿತಿ ಸದಸ್ಯ ಮೊಯಿದ್ದೀನ್ ಹಳೆಯಂಗಡಿ ಎಂಬವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ಮಂದಿಯನ್ನು ಕಾವೂರು, ಜೋಕಟ್ಟೆ, ಮಂಗಳೂರಿನಲ್ಲಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಆನಂತರ ಬಿಡುಗಡೆಗೊಳಿಸಿದ್ದಾರೆ.

ಮಂಗಳೂರಿನ ಮೂರು ಕಡೆ ಎನ್ಐಎ ಅಧಿಕಾರಿಗಳ ಉಪಸ್ಥಿತಿಯಲ್ಲಿ ದಾಳಿ ನಡೆದಿದ್ದರೆ, ಇತರ ಐದು ಕಡೆ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ. ವಿಟ್ಲ, ಬಂಟ್ವಾಳದಲ್ಲಿಯೂ ಪೊಲೀಸರು ಪಿಎಫ್ಐ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಮಂಗಳೂರಿನ ಎಸ್.ಡಿ.ಪಿ.ಐ, ಪಿ.ಎಫ್.ಐ ಕಚೇರಿಯಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಕಚೇರಿಯಲ್ಲಿ ದಾಖಲೆಗಳಿಗಾಗಿ ಅಧಿಕಾರಿಗಳು ಜಾಲಾಡಿದ್ದಾರೆ. ಕಚೇರಿ ಒಳಗೆ ಕಾಗದ ಪತ್ರಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಚೇರಿ ಮುಂಭಾಗದ ಗಾಜು ಒಡೆದು ಹಾಕಿರುವುದಾಗಿ ಎಸ್.ಡಿ.ಪಿ.ಐ ನಾಯಕರು ಆರೋಪಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ, ರಾಜಕೀಯ ಪಕ್ಷದ ಕಚೇರಿಯೊಂದಕ್ಕೆ ಈ ರೀತಿ ದಾಳಿ ನಡೆಸಿದ್ದು ಖಂಡನೀಯ. ಎನ್ ಐಎ ಅಧಿಕಾರಿಗಳು ಮುಂಜಾನೆ 3.30 ರ ವೇಳೆಗೆ ಕಚೇರಿಗೆ ಬಂದಿದ್ದಾರೆ ಎಂದು ನನಗೆ 5 ಗಂಟೆಯ ವೇಳೆಗೆ ಮಾಹಿತಿ ಲಭ್ಯವಾಗಿದೆ. ಎನ್ ಐ ಅಧಿಕಾರಿಗಳು ಪಿಎಫ್ಐ ಕಚೇರಿಗೆ ದಾಳಿ ಮಾಡುವ ಸಲುವಾಗಿ ಬಂದಿದ್ದರು. ಆದರೆ ನಮ್ಮ ಕಚೇರಿಯೂ ಹತ್ತಿರದಲ್ಲಿದ್ದ ಕಾರಣ ನಮ್ಮ ಕಚೇರಿಗೂ ದಾಳಿ ಮಾಡಿದ್ದಾರೆ. ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ, ಕಚೇರಿ ಕಟ್ಟಡದ ಬಾಡಿಗೆ ಅಗ್ರಿಮೆಂಟ್ ದಾಖಲೆ ಪಡೆದುಕೊಂಡು ಹೋಗಿದ್ದಾರೆ. ಕಚೇರಿಯಲ್ಲಿ ಬಳಕೆ ಮಾಡುವ ಲ್ಯಾಪ್ ಟಾಪ್ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಪಕ್ಷದ ಸಂಬಂಧಿಸಿದ ಕೆಲವು ಫೋಟೋಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
NIA raid on SDPI, PFI office, houses in Mangalore, Three including PFI leader AK Ashraff taken to custody. Sleuths of NIA raided the offices of SDPI and PFI in the city, early in the morning on Thursday September 22
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm