ಬ್ರೇಕಿಂಗ್ ನ್ಯೂಸ್
23-09-22 09:22 pm HK News Desk ಕರಾವಳಿ
ಮಂಗಳೂರು, ಸೆ.23: ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ತಂದೆ ಮುನೀರ್ ಅಹಮದ್(57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಐದು ಗಂಟೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ್ ಅಹಮದ್ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಮುನೀರ್ ಅಹಮದ್ ತೀರ್ಥಹಳ್ಳಿಯ ಪ್ರತಿಷ್ಟಿತ ಕುಟುಂಬದವರಾಗಿದ್ದು, ಮುನೀರ್ ಅಹಮದ್ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರಾಗಿದ್ದರು. ತೀರ್ಥಹಳ್ಳಿಯಲ್ಲಿ ಹೋಲ್ ಸೇಲ್ ಮೀನು ವ್ಯಾಪಾರಿಯಾಗಿದ್ದ ಮುನೀರ್ ಮಂಗಳೂರಿನಲ್ಲಿಯೂ ಉದ್ಯಮ ಮುಂದುವರಿಸಿದ್ದರು.
ಶನಿವಾರ (ನಾಳೆ) ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಶಿವಮೊಗ್ಗ ಪೊಲೀಸರು ಬಂಧನದಲ್ಲಿರುವ ಮಾಜ್ನನ್ನು ತಂದೆಯ ಅಂತಿಮ ದರ್ಶನಕ್ಕೆ ಕರೆತರುವ ಸಾಧ್ಯತೆ ಇದೆ. ಎರಡು ವರ್ಷದ ಹಿಂದೆ ಗೋಡೆ ಬರಹ ಪ್ರಕರಣದಲ್ಲಿ ಮಗ ಮಾಝ್ ಬಂಧನ ಆದಾಗಲೂ ತಂದೆ ಮುನೀರ್ ಅಹ್ಮದ್ ನೋವಿಗೆ ಒಳಗಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Father of one of the suspected terrorists, who had been arrested recently in Shivamogga, passed away at a hospital here on Friday, September 23 in the evening. The deceased is identified as Muneer Ahmed (57), father of Maaz Muneer Ahmed (22) who had been arrested by the police on charges of terror. The deceased was admitted to Father Muller Hospital after suffering a heart attack, sources said.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm