ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am