ಬ್ರೇಕಿಂಗ್ ನ್ಯೂಸ್
24-09-22 12:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಪೇ ಸಿಂ ಅಭಿಯಾನ ಕರಾವಳಿಗೂ ಕಾಲಿಟ್ಟಿದೆ. ಬೆಳ್ತಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣ, ಆಸುಪಾಸಿನ ಸಾರ್ವಜನಿಕ ಪ್ರದೇಶದಲ್ಲಿ ಮುಖ್ಯಮಂತ್ರಿ ಚಿತ್ರವುಳ್ಳ ಪೇ ಸಿಂ ಸ್ಟಿಕ್ಕರ್ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಸಾರ್ವಜನಿಕ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಕ್ಕರ್ ಅಂಟಿಸಿದ್ದಾರೆ. ಸಾರಿಗೆ ಬಸ್, ಬಸ್ ಸ್ಟ್ಯಾಂಡ್, ಅಂಗಡಿಗಳ ಗೋಡೆಗಳ ಮೇಲೆ ಸ್ಟಿಕ್ಕರ್ ಅಂಟಿಸಲಾಗಿದೆ. ಪೇ ಸಿಂ ಸ್ಟಿಕ್ಕರ್ ಜೊತೆ ಪೇ ಎಂ ಎಲ್ ಎ ಸ್ಟಿಕ್ಕರ್ ಕೂಡ ಜೊತೆಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಅಣಕಿಸಲಾಗಿದೆ.




ಇದೇ ವೇಳೆ, ಸೋಷಿಯಲ್ ಮೀಡಿಯಾದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೇ ಸ್ಟಿಕ್ಕರ್ ಹರಿದಾಡುತ್ತಿದೆ. ಬೆಂಗಳೂರು ನಗರದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಟಿಕ್ಕರ್, ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿತ್ತು. ಇದೇ ವಿಚಾರದಲ್ಲಿ ವಿಧಾನಸಭೆ ಅಧಿವೇಶನದಲ್ಲಿಯೂ ಜಟಾಪಟಿ ನಡೆದಿತ್ತು. ಬೆಂಗಳೂರಿನಲ್ಲಿ ಸ್ಟಿಕ್ಕರ್ ಅಂಟಿಸಿದ್ದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ, ಐದು ಮಂದಿಯನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಕರ್ತರ ಜೊತೆ ಸೇರಿ ನಾನೂ ಸ್ಟಿಕ್ಕರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ ಎಂದು ಸವಾಲು ಹಾಕಿದ್ದರು. ರಾಜ್ಯದೆಲ್ಲೆಡೆ ಸ್ಟಿಕ್ಕರ್ ಅಭಿಯಾನ ನಡೆಸುವ ಸುಳಿವನ್ನೂ ನೀಡಿದ್ದರು.
PayCM photos, 40 percent Sarkara camping now starts in Belthangady, Mangalore with CM Bommai likeness. Posters targeting Karnataka chief minister Basavaraj Bommai - with his likeness pasted over the image of a QR code and the phrase 'PayCM' written above - were spotted across Bengaluru recently.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm