ಬ್ರೇಕಿಂಗ್ ನ್ಯೂಸ್
24-09-22 12:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಪೇ ಸಿಂ ಅಭಿಯಾನ ಕರಾವಳಿಗೂ ಕಾಲಿಟ್ಟಿದೆ. ಬೆಳ್ತಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣ, ಆಸುಪಾಸಿನ ಸಾರ್ವಜನಿಕ ಪ್ರದೇಶದಲ್ಲಿ ಮುಖ್ಯಮಂತ್ರಿ ಚಿತ್ರವುಳ್ಳ ಪೇ ಸಿಂ ಸ್ಟಿಕ್ಕರ್ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಸಾರ್ವಜನಿಕ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಕ್ಕರ್ ಅಂಟಿಸಿದ್ದಾರೆ. ಸಾರಿಗೆ ಬಸ್, ಬಸ್ ಸ್ಟ್ಯಾಂಡ್, ಅಂಗಡಿಗಳ ಗೋಡೆಗಳ ಮೇಲೆ ಸ್ಟಿಕ್ಕರ್ ಅಂಟಿಸಲಾಗಿದೆ. ಪೇ ಸಿಂ ಸ್ಟಿಕ್ಕರ್ ಜೊತೆ ಪೇ ಎಂ ಎಲ್ ಎ ಸ್ಟಿಕ್ಕರ್ ಕೂಡ ಜೊತೆಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಅಣಕಿಸಲಾಗಿದೆ.




ಇದೇ ವೇಳೆ, ಸೋಷಿಯಲ್ ಮೀಡಿಯಾದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೇ ಸ್ಟಿಕ್ಕರ್ ಹರಿದಾಡುತ್ತಿದೆ. ಬೆಂಗಳೂರು ನಗರದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಟಿಕ್ಕರ್, ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿತ್ತು. ಇದೇ ವಿಚಾರದಲ್ಲಿ ವಿಧಾನಸಭೆ ಅಧಿವೇಶನದಲ್ಲಿಯೂ ಜಟಾಪಟಿ ನಡೆದಿತ್ತು. ಬೆಂಗಳೂರಿನಲ್ಲಿ ಸ್ಟಿಕ್ಕರ್ ಅಂಟಿಸಿದ್ದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ, ಐದು ಮಂದಿಯನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಕರ್ತರ ಜೊತೆ ಸೇರಿ ನಾನೂ ಸ್ಟಿಕ್ಕರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ ಎಂದು ಸವಾಲು ಹಾಕಿದ್ದರು. ರಾಜ್ಯದೆಲ್ಲೆಡೆ ಸ್ಟಿಕ್ಕರ್ ಅಭಿಯಾನ ನಡೆಸುವ ಸುಳಿವನ್ನೂ ನೀಡಿದ್ದರು.
PayCM photos, 40 percent Sarkara camping now starts in Belthangady, Mangalore with CM Bommai likeness. Posters targeting Karnataka chief minister Basavaraj Bommai - with his likeness pasted over the image of a QR code and the phrase 'PayCM' written above - were spotted across Bengaluru recently.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm