ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm