ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm