ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am