ಬ್ರೇಕಿಂಗ್ ನ್ಯೂಸ್
25-09-22 04:58 pm Mangalore Correspondent ಕರಾವಳಿ
ಮಂಗಳೂರು, ಸೆ.25: ನವ ವಿವಾಹಿತ ಯುವಕ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಕ್ಕೂರಿನಲ್ಲಿ ನಡೆದಿದೆ. ಜಪ್ಪಿನಮೊಗರು ತಂದೋಳಿಗೆ ನಿವಾಸಿ ಧೀರಜ್ ಕುಲಾಲ್(32) ಮೃತ ದುರ್ದೈವಿ.
ಖಾಸಗಿ ಕಂಪನಿಯಲ್ಲಿ ಮಾರ್ಕೆಂಟಿಗ್ ಮ್ಯಾನೇಜರ್ ಆಗಿದ್ದ ಧೀರಜ್ ಆರೇಳು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಧೀರಜ್ ಭಾನುವಾರ ಮಧ್ಯಾಹ್ನ ಎಕ್ಕೂರು ರೈಲ್ವೇ ಮೇಲ್ಸೇತುವೆ ಕೆಳಗಡೆಯ ರೈಲ್ವೇ ಹಳಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಧೀರಜ್ ಅವರ ತಾಯಿ ಗಿರಿಜಾ ಅವರು 1995 ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ತಂದೆ ತಾಯಿಗೆ ಪುಷ್ಪರಾಜ್ ಮತ್ತು ಧೀರಜ್ ಇಬ್ಬರೇ ಮಕ್ಕಳು. ಧೀರಜ್ ಅವರ ತಂದೆ, ಪತ್ನಿ ಸಾವಿನ ಬಳಿಕ ಮಕ್ಕಳನ್ನ ತೊರೆದು ಹೋಗಿದ್ದರು ಎನ್ನಲಾಗಿದೆ.

ಆನಂತರ, ಅನಾಥರಾಗಿದ್ದ ಧೀರಜ್ ಮತ್ತು ಪುಷ್ಪರಾಜ್ ದೊಡ್ಡಮ್ಮನ ಪಾಲನೆಯಲ್ಲಿ ಬೆಳೆದಿದ್ದರು. ಈ ನಡುವೆ, ಧೀರಜ್ ಅವರ ಸೋದರ ಪುಷ್ಪರಾಜ್ ಎರಡು ವರ್ಷಗಳ ಹಿಂದೆ ಪದವಿನಂಗಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಹೀಗೆ ಅಪಘಾತಗಳಲ್ಲೆ ತನ್ನವರನ್ನ ಕಳಕೊಂಡಿದ್ದ ಧೀರಜ್ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ಅಕಾಲ ಮೃತ್ಯುವನ್ನು ತಂದುಕೊಂಡಿದ್ದಾರೆ. ಧೀರಜ್ ಸಾವು ಕುಟುಂಬ ಮತ್ತು ಸ್ನೇಹಿತರನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ. ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
32 year old man commits suicide by giving his head to the train at Yekkur in Mangalore. The deceased has been identified as Deeraj Kulal. Financial crises is the reason for the extreme step it is said.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm