ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am