ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm