ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm