ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am