ಬ್ರೇಕಿಂಗ್ ನ್ಯೂಸ್
26-09-22 10:37 pm Mangalore Correspondent ಕರಾವಳಿ
ಮಂಗಳೂರು, ಸೆ.26: ವಕ್ಫ್ ಆಸ್ತಿ ದುರುಪಯೋಗದ ಬಗ್ಗೆ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವರದಿಯನ್ನು ಒಪ್ಪಿದ್ದೇವೆ. ಅದರ ಬಗ್ಗೆ ಮೂರು ತಿಂಗಳ ಹಿಂದೆಯೇ ವಿಧಾನ ಪರಿಷತ್ತಿನ ಭರವಸೆಗಳ ಕಮಿಟಿಯ ಅಧ್ಯಕ್ಷ ಬಿಎಂ ಫಾರೂಕ್ ನೇತೃತ್ವದಲ್ಲಿ ಚರ್ಚೆ ನಡೆಸಿದ್ದೆವು. ಸರಕಾರಕ್ಕೆ ವರದಿಯನ್ನು ಒಪ್ಪಿಸಿ ತನಿಖೆಗೆ ಹೇಳಿದ್ದೇವೆ. ರಾಜ್ಯ ಸರಕಾರ ಲೋಕಾಯುಕ್ತಕ್ಕೆ ಕೊಡಲಿ, ಸಿಬಿಐ ತನಿಖೆಗೇ ಕೊಡಲಿ. ಯಾವುದೇ ತನಿಖೆಗೂ ನಾವು ಸಿದ್ಧರಿದ್ದೇವೆ ಎಂದು ವಕ್ಫ್ ಕಮಿಟಿ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ.
ನಗರದ ಪಾಂಡೇಶ್ವರದಲ್ಲಿ ವಕ್ಫ್ ಇಲಾಖೆಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ವಕ್ಫ್ ಇಲಾಖೆಯಲ್ಲಿ ನಾನು 2011ರಲ್ಲಿಯೇ ಮೆಂಬರ್ ಆಗಿದ್ದೇನೆ. ಮಾಣಿಪ್ಪಾಡಿಯವರು 2012ರಲ್ಲಿ ವರದಿ ಕೊಟ್ಟಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ವಕ್ಫ್ ಆಯೋಗದ ಅಧ್ಯಕ್ಷರಿಗೆ ಮಾತ್ರ ಅಧಿಕಾರ ಇದೆ. ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ತನಿಖೆ ನಡೆಸಿ ಕಬಳಿಕೆ ಆಗಿರುವ ಆಸ್ತಿಯನ್ನು ಮರಳಿ ಪಡೆಯಬೇಕಾಗಿದೆ ಎಂದು ಹೇಳಿದರು.
ಬೀದರ್, ಗುಲ್ಬರ್ಗ ಮತ್ತು ಬೆಂಗಳೂರಿನಲ್ಲಿ ವಕ್ಫ್ ಇಲಾಖೆಗೆ ಅತಿ ಹೆಚ್ಚು ಆಸ್ತಿ ಇದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬಹಮನಿ ಸುಲ್ತಾನರು ವಕ್ಫ್ ಆಸ್ತಿಯೆಂದು ನೀಡಿದ್ದ ಭೂಮಿಯಿದ್ದು, ಅದನ್ನು ಕಂಪೌಂಡ್ ಹಾಕಿ ರಕ್ಷಿಸಲು ಕ್ರಮ ಕೈಗೊಂಡಿದ್ದೇವೆ. ಅದಕ್ಕಾಗಿ 70 ಕೋಟಿ ಸರಕಾರದಿಂದ ಬಿಡುಗಡೆ ಮಾಡಲಾಗಿದೆ. ವಕ್ಫ್ ಆಸ್ತಿಯನ್ನು ಮರಳಿ ಪಡೆಯುವಲ್ಲಿ ಕಾನೂನು ಇಲಾಖೆಯಲ್ಲಿ ವೈಫಲ್ಯ ಆಗಿರುವುದನ್ನು ಮನಗಂಡು ಸೂಕ್ತವಾಗಿ ಸ್ಪಂದಿಸಲು ತಜ್ಞ ವಕೀಲರನ್ನು ನೇಮಕ ಮಾಡಿದ್ದೇವೆ. ಅಶೋಕ್ ಹಾರ್ನಳ್ಳಿ, ಜಯದೇವ ಪಾಟೀಲರಂಥ ವಕೀಲರನ್ನು ನೇಮಕ ಮಾಡಿದ್ದು ವಕ್ಫ್ ಆಸ್ತಿ ಮರಳಿ ಸಿಕ್ಕಿದರೆ ನಮಗೆ ಸರಕಾರದಿಂದ ಅನುದಾನ ಕೇಳುವ ಸ್ಥಿತಿ ಬರುವುದಿಲ್ಲ.
ವಕ್ಫ್ ಇಲಾಖೆಯಲ್ಲಿ ಬೆಂಗಳೂರಿನಲ್ಲಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿವೆ. ಬೀದರ್ ಖಬರಸ್ತಾನದಲ್ಲಿ ಏಶ್ಯಾದಲ್ಲೇ ಅತಿ ಹೆಚ್ಚು 5 ಸಾವಿರ ಎಕ್ರೆ ಆಸ್ತಿಯಿದೆ. ಆದರೆ ಇದನ್ನು ಸೂಕ್ತವಾಗಿ ಬಳಸಿಕೊಳ್ಳದೆ ನಾವು ಸೋತಿದ್ದೇವೆ. 2020ರಲ್ಲಿ ವಕ್ಫ್ ಬೋರ್ಡಿಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ. 26 ಜಿಲ್ಲೆಗಳಿಗೆ ಕಮಿಟಿ ನೇಮಕ ಆಗಿದೆ. ಇದರಲ್ಲಿ ರಾಜಕೀಯ ಇಲ್ಲ. ವಕ್ಫ್ ಪ್ರತ್ಯೇಕ ಕಾನೂನಾಗಿದ್ದು, ಸ್ವತಂತ್ರವಾಗಿದೆ. ಇದರಲ್ಲಿ ನೇಮಕ ಮಾಡುವ ಸಂದರ್ಭದಲ್ಲಿ ರಾಜಕೀಯ ತಂದರೆ, ಸಮಸ್ಯೆ ಆಗುತ್ತದೆ. ರಾಜಕೀಯ ದೂರವಿಟ್ಟು ನಾವು ವಕ್ಫ್ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾಗಿದೆ ಎಂದರು.
Mangalore Waqf board shafi saadi says Anwar Manippady is ready for any investigation.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am