ಬ್ರೇಕಿಂಗ್ ನ್ಯೂಸ್
28-09-22 03:45 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್ ಪಕ್ಕದಲ್ಲಿ ಸ್ಥಳೀಯ ಮಹಿಳೆಯೊಬ್ಬರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಆಯೋಜಕರು ತಕ್ಷಣ ವಿವಾದಿತ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಕೊಲ್ಯದ ನಾರಾಯಣ ಗುರು ಸಭಾಂಗಣದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ, ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನ ಬುಧವಾರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಪ್ರಚಾರಾರ್ಥ ಸಭಾಂಗಣದ ಹೊರಗಡೆ ಹಾಕಿರುವ ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರಗಳನ್ನ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸಲ್ಲಿ ಸ್ಥಳೀಯ ಹಿಂದೂ ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ವೇಳೆ ತೆಗೆಸಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೀಮಂತ ಕಾರ್ಯಕ್ರಮದ ಸಭಾಂಗಣಕ್ಕೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಹಿಂದು ವಿರೋಧಿ ಖಾದರ್ ಎಂದು ಧಿಕ್ಕಾರ ಕೂಗಿದ್ದಾರೆ. ಹಿಂದು ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಕಾರ್ಯಕ್ರಮದ ಆಯೋಜಕರು ಕೂಡಲೇ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು ಮಾತನಾಡಿ ತಾಯಂದಿರಿಗೆ ಸ್ಥೈರ್ಯ ನೀಡುವ ಕಾರ್ಯಕ್ರಮ ಎಂದು ಹೇಳಿಕೊಂಡು ಅನುಮತಿ ಇಲ್ಲದೆ ಯಾವುದೋ ಹಿಂದೂ ಹುಡುಗಿಯ ಫೋಟೊವನ್ನ ಸಾರ್ವಜನಿಕವಾಗಿ ಫ್ಲೆಕ್ಸ್ ಹಾಕಿ ಆಕೆ ಮುಜುಗರ ಪಡುವಂತೆ ಮಾಡಿದನ್ನ ಬಜರಂಗದಳ ಖಂಡಿಸುತ್ತಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡುವುದಾಗಿ ಹೇಳಿದರು.ಆಯೋಜಕರು ಮಾಡಿದ ಎಡವಟ್ಟಿನಿಂದ ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಗೊಂದಲ ನಡೆಯುವಂತಾಯಿತು.
Mangalore, Pregnant photo of woman used on government banner at Ullal without permission along with MLA UT Khader sparks controversy.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm