ಬ್ರೇಕಿಂಗ್ ನ್ಯೂಸ್
28-09-22 08:04 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಚುನಾವಣೆಯಲ್ಲಿ ಇಪ್ಪತ್ತು, ಮೂವತ್ತು ಸಾವಿರ ಮತಗಳ ಅಂತರದಲ್ಲಿ ಗೆದ್ದವನಿಗೆ ಸಾಮೂಹಿಕ ಸೀಮಂತದಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯತೆ ಇಲ್ಲ. ನಾಲ್ಕು ಜನ ಬಂದು ಬೊಬ್ಬೆ ಹೊಡೆದರೆ ಇಂತಹ ಮಾದರಿ ಕಾರ್ಯಕ್ರಮದ ಬಗ್ಗೆ ಊರಿಗೆ ಢಂಗುರ ಬಾರಿಸಿದಂತಾಯ್ತು. ಅವರಿಗೆ ನನ್ನ ಅಭಿನಂದನೆ ಎಂದು ಬಜರಂಗದಳದ ಕಾರ್ಯಕರ್ತರಿಗೆ ಶಾಸಕ ಯು.ಟಿ ಖಾದರ್ ಟಾಂಗ್ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಪ್ರಯುಕ್ತ ಬುಧವಾರ ಕೊಲ್ಯದ ನಾರಾಯಣಗುರು ಸಭಾಭವನದಲ್ಲಿ ನಡೆದ ಅನ್ನಪ್ರಾಶನ, ಪೌಷ್ಟಿಕ ಆಹಾರ ,ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.


ಕಾರ್ಯಕ್ರಮ ಆರಂಭಕ್ಕೂ ಮೊದಲು ಸಭಾಂಗಣದ ಹೊರಗೆ ಹಾಕಲಾಗಿದ್ದ ಫ್ಲೆಕ್ಸ್ ವಿಚಾರದಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸ್ ನಲ್ಲಿ ಸ್ಥಳೀಯ ಹಿಂದು ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾರ್ಯಕ್ರಮ ಆಯೋಜಕರು ಫ್ಲೆಕ್ಸನ್ನ ತೆರವುಗೊಳಿಸಿದ್ದರು.


ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖಾದರ್, ಗರ್ಭಿಣಿಯರಿಗೆ ಅಗತ್ಯ ಉಳ್ಳ ಅರ್ಥಪೂರ್ಣ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಸೇರಿರುವ ಗರ್ಭಿಣಿಯರನ್ನ ಉದ್ದೇಶಿಸಿ ಮಾತನಾಡಿದ ಅವರು ಟೆನ್ಷನ್ ರಹಿತ ಆರೋಗ್ಯವಂತ ಮಗು ಮತ್ತು ತಾಯಂದಿರು ಸಮಾಜದಲ್ಲಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಶಾಸಕ ಖಾದರ್ ಅವರು ಮಕ್ಕಳಿಗೆ ಅನ್ನಪ್ರಾಶನ ನಡೆಸಿದರು. ಸುಮಂಗಲೆಯರಿಂದ ಗರ್ಭಿಣಿಯರಿಗೆ ಬಾಗಿನ, ಫಲ, ಪುಷ್ಪ, ಉಡುಗೊರೆ, ಆರತಿ ಎತ್ತಿ ಸಾಮೂಹಿಕ ಸೀಮಂತ ನಡೆಸಲಾಯಿತು.
Banner of a pregnant woman without permission at Ullal, UT Khader slams Bajarangdal members.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm