ಬ್ರೇಕಿಂಗ್ ನ್ಯೂಸ್
29-09-22 07:10 pm Mangalore Correspondent ಕರಾವಳಿ
ಮಂಗಳೂರು, ಸೆ.29: ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರ ಒಡೆತನದಲ್ಲಿದ್ದ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖರೀದಿಸಿದ್ದು, ಭವಿಷ್ಯದಲ್ಲಿ ಇವುಗಳ ಆಡಳಿತವನ್ನು ಕೆನರಾ ಸಂಸ್ಥೆಗಳೇ ನೋಡಿಕೊಳ್ಳಲಿವೆ.
ಮೇರಿಹಿಲ್ ಕೊಂಚಾಡಿಯಲ್ಲಿ 2012ರಲ್ಲಿ ವಿಕಾಸ್ ಪಿಯು ಕಾಲೇಜು ಮತ್ತು ಹಾಸ್ಟೆಲ್ ವ್ಯವಸ್ಥೆಯನ್ನು ಆರಂಭಿಸಲಾಗಿತ್ತು. ಆನಂತರ ವಿಕಾಸ್ ಕಾಲೇಜಿನಲ್ಲಿ ಪದವಿ ಕೋರ್ಸನ್ನೂ ಆರಂಭಿಸಲಾಗಿತ್ತು. ಮಂಗಳೂರಿನ ಸುವ್ಯವಸ್ಥಿತ ಪಿಯು ಕಾಲೇಜು ಎಂಬ ಗರಿಮೆಯನ್ನೂ ವಿಕಾಸ್ ಕಾಲೇಜು ಪಡೆದಿತ್ತು. ಏರ್ಪೋರ್ಟ್ ರಸ್ತೆಯಲ್ಲೇ ಕಾಲೇಜು ಕಟ್ಟಡ ಇದ್ದುದರಿಂದ ಅತ್ಯಲ್ಪ ಅವಧಿಯಲ್ಲಿ ಪ್ರಸಿದ್ಧಿಯನ್ನೂ ಪಡೆದಿತ್ತು.
ಹಾಗೆ ನೋಡಿದರೆ, 1993ರಲ್ಲಿಯೇ ವಿಕಾಸ್ ಎಜುಕೇಶನ್ ಟ್ರಸ್ಟನ್ನು ಕೃಷ್ಣ ಪಾಲೆಮಾರ್ ಸ್ಥಾಪಿಸಿದ್ದರು. 1994ರಿಂದ ವಿಕಾಸ್ ಹೆಸರಿನಲ್ಲಿ ಫಿಸಿಯೋಥೆರಪಿ ಶಿಕ್ಷಣವನ್ನೂ ಆರಂಭಿಸಲಾಗಿತ್ತು. ಫಿಸಿಯೋಥರೆಪಿಯ ವಿವಿಧ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ನೀಡುವ ಉಪಕ್ರಮ ನಡೆದು ಬಂದಿತ್ತು. ಆನಂತರ ಪಿಯು ಮತ್ತು ಪದವಿ ಕಾಲೇಜುಗಳನ್ನು ತೆರೆಯಲಾಗಿತ್ತು. ಸುಸಜ್ಜಿತ ಕಟ್ಟಡ ಮತ್ತು ಮೂಲಸೌಕರ್ಯಗಳಿದ್ದ ವಿಕಾಸ್ ಶಿಕ್ಷಣ ಸಂಸ್ಥೆಯನ್ನೀಗ ಅಧಿಕೃತವಾಗಿ ಮಂಗಳೂರಿನ ಪ್ರತಿಷ್ಠೆಯ ಸಂಕೇತವಾಗಿರುವ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ವಿಲೀನ ಮಾಡಲಾಗಿದೆ. ಕೃಷ್ಣ ಪಾಲೆಮಾರ್ ಮತ್ತು ಕೆನರಾ ಹೈಸ್ಕೂಲ್ ಸಂಸ್ಥೆಗಳ ಟ್ರಸ್ಟಿಗಳ ಪ್ರಮುಖರು ಈ ಕುರಿತ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
ಇನ್ನು ವಿಕಾಸ್ ಎಜುಕೇಶನ್ ಟ್ರಸ್ಟ್ ನಿಂದ ನಿರ್ವಹಿಸುತ್ತಿದ್ದ ಪದವಿ ಪೂರ್ವ, ಪದವಿ ಮತ್ತು ಫಿಸಿಯೋಥೆರಪಿ ಕಾಲೇಜುಗಳ ಸಂಪೂರ್ಣ ಆಡಳಿತ, ನಿರ್ವಹಣೆ ಮತ್ತು ಅದಕ್ಕೆ ಸಂಬಂಧಪಟ್ಟ ಎಲ್ಲ ಕಾರ್ಯಗಳು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಆಡಳಿತ ಮಂಡಳಿಯ ಮೂಲಕವೇ ನಡೆಯಲಿದೆ ಎಂದು ಅದರ ಟ್ರಸ್ಟಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore popular Vikas college is now taken over by Canara college group of Institutions. Vikas Pre University College is an educational institution run by Vikas Education Trust, in Mangalore, Karnataka, India. This college was established by the trust in the year 2012. The trust founded by Sri Krishna J Palemar who is a social activist and was also a Minister in B. S.Yediyurappa's Cabinet.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm