ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm