ಬ್ರೇಕಿಂಗ್ ನ್ಯೂಸ್
30-09-22 09:05 pm Mangalore Correspondent ಕರಾವಳಿ
ಉಳ್ಳಾಲ, ಸೆ.30 : ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಾ ಬಂದಿರುವ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ರಾಜಕಾರಣ ಯುಗಾಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.
ಪಂಡಿತ್ ಹೌಸ್ ಜಂಕ್ಷನ್ ನ ಮಾಯಾದೀಪ ಕಾಂಪ್ಲೆಕ್ಸಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನವರಾತ್ರಿಯ ಶುಭ ದಿನದಂದೇ ಪಕ್ಷದ ನೂತನ ಕಾರ್ಯಾಲಯವು ಉದ್ಘಾಟನೆಗೊಂಡಿದ್ದು ಕಾರ್ಯಕರ್ತರಿಗೆ ವಿಶೇಷ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರ ಭಾವನೆಗೆ ಪೂರಕವಾದ ಕಾರ್ಯಾಲಯವನ್ನ ಕ್ಷೇತ್ರಾಧ್ಯಕ್ಷರು ನಿರ್ಮಿಸಿರುವುದು ಅಭಿನಂದನೀಯ. ಮುಂದಿನ ಬಾರಿ ಉಳ್ಳಾಲದಲ್ಲಿ ಬಿಜೆಪಿ ಪಕ್ಷದ ಶಾಸಕ ಗೆದ್ದು ಬರುವ ಸಂಕಲ್ಪ ತೊಟ್ಟು ಪ್ರತಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.


ಹೆಂಗಸರಿದ್ದಾರೆಂದು ಖಾದರ್ ಭಾಷಣ
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಮೊನ್ನೆ ಕೊಲ್ಯದಲ್ಲಿ ನಡೆದ ಸರಕಾರಿ ಪ್ರಾಯೋಜಕತ್ವದ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲಿ ನೆರೆದಿದ್ದ ಹೆಂಗಸರ ಧೈರ್ಯದಲ್ಲಿ ಶಾಸಕ ಯು.ಟಿ.ಖಾದರ್ ಭಾಷಣ ಮಾಡಿದ್ದಾರೆ. 20-30 ಸಾವಿರ ಮತಗಳಿಂದ ಗೆಲ್ಲುತ್ತಿದ್ದೇನೆಂದು ಬೀಗುತ್ತಿರುವ ನಿಮ್ಮನ್ನ ಅದೇ 20-30 ಸಾವಿರ ಮತಗಳ ಅಂತರದಲ್ಲೇ ಸೋಲುಣಿಸಲೂ ಕ್ಷೇತ್ರದ ಮತದಾರರಿಗೆ ತಿಳಿದಿದ್ದು ಮುಂಬರುವ ಮಾರ್ಚ್ ನಲ್ಲಿ ಖಾದರ್ ರಾಜಕೀಯ ಅಂತ್ಯಗೊಳ್ಳಲಿದೆ ಎಂದರು.

ಅಲ್ಪಸಂಖ್ಯಾತರ ಮತ ಬೇಟೆಗಾಗಿ ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರನ್ನ ಕೋಟೆಕಾರಲ್ಲಿ ನೆಲೆಸಲು ಅವಕಾಶ ಕಲ್ಪಿಸಲು ಮಾಡುತ್ತಿರುವ ಸಂಚು ನಮಗೆ ತಿಳಿದಿದೆ. ನೀವು ಭಾರತ್ ಜೋಡೊ ಯಾತ್ರೆ ಮಾಡುವ ಬದಲು ಆದಷ್ಟು ಶೀಘ್ರನೇ ಕುತ್ತಾರು ವಿ.ವಿ. ರಸ್ತೆಯನ್ನ ಸಂಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Mangalore New BJP office inaugurated in Ullal.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm