ಬ್ರೇಕಿಂಗ್ ನ್ಯೂಸ್
30-09-22 09:05 pm Mangalore Correspondent ಕರಾವಳಿ
ಉಳ್ಳಾಲ, ಸೆ.30 : ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಾ ಬಂದಿರುವ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ರಾಜಕಾರಣ ಯುಗಾಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.
ಪಂಡಿತ್ ಹೌಸ್ ಜಂಕ್ಷನ್ ನ ಮಾಯಾದೀಪ ಕಾಂಪ್ಲೆಕ್ಸಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನವರಾತ್ರಿಯ ಶುಭ ದಿನದಂದೇ ಪಕ್ಷದ ನೂತನ ಕಾರ್ಯಾಲಯವು ಉದ್ಘಾಟನೆಗೊಂಡಿದ್ದು ಕಾರ್ಯಕರ್ತರಿಗೆ ವಿಶೇಷ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರ ಭಾವನೆಗೆ ಪೂರಕವಾದ ಕಾರ್ಯಾಲಯವನ್ನ ಕ್ಷೇತ್ರಾಧ್ಯಕ್ಷರು ನಿರ್ಮಿಸಿರುವುದು ಅಭಿನಂದನೀಯ. ಮುಂದಿನ ಬಾರಿ ಉಳ್ಳಾಲದಲ್ಲಿ ಬಿಜೆಪಿ ಪಕ್ಷದ ಶಾಸಕ ಗೆದ್ದು ಬರುವ ಸಂಕಲ್ಪ ತೊಟ್ಟು ಪ್ರತಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.


ಹೆಂಗಸರಿದ್ದಾರೆಂದು ಖಾದರ್ ಭಾಷಣ
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಮೊನ್ನೆ ಕೊಲ್ಯದಲ್ಲಿ ನಡೆದ ಸರಕಾರಿ ಪ್ರಾಯೋಜಕತ್ವದ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲಿ ನೆರೆದಿದ್ದ ಹೆಂಗಸರ ಧೈರ್ಯದಲ್ಲಿ ಶಾಸಕ ಯು.ಟಿ.ಖಾದರ್ ಭಾಷಣ ಮಾಡಿದ್ದಾರೆ. 20-30 ಸಾವಿರ ಮತಗಳಿಂದ ಗೆಲ್ಲುತ್ತಿದ್ದೇನೆಂದು ಬೀಗುತ್ತಿರುವ ನಿಮ್ಮನ್ನ ಅದೇ 20-30 ಸಾವಿರ ಮತಗಳ ಅಂತರದಲ್ಲೇ ಸೋಲುಣಿಸಲೂ ಕ್ಷೇತ್ರದ ಮತದಾರರಿಗೆ ತಿಳಿದಿದ್ದು ಮುಂಬರುವ ಮಾರ್ಚ್ ನಲ್ಲಿ ಖಾದರ್ ರಾಜಕೀಯ ಅಂತ್ಯಗೊಳ್ಳಲಿದೆ ಎಂದರು.

ಅಲ್ಪಸಂಖ್ಯಾತರ ಮತ ಬೇಟೆಗಾಗಿ ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರನ್ನ ಕೋಟೆಕಾರಲ್ಲಿ ನೆಲೆಸಲು ಅವಕಾಶ ಕಲ್ಪಿಸಲು ಮಾಡುತ್ತಿರುವ ಸಂಚು ನಮಗೆ ತಿಳಿದಿದೆ. ನೀವು ಭಾರತ್ ಜೋಡೊ ಯಾತ್ರೆ ಮಾಡುವ ಬದಲು ಆದಷ್ಟು ಶೀಘ್ರನೇ ಕುತ್ತಾರು ವಿ.ವಿ. ರಸ್ತೆಯನ್ನ ಸಂಪೂರ್ಣಗೊಳಿಸುವಂತೆ ಆಗ್ರಹಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Mangalore New BJP office inaugurated in Ullal.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am