ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm