ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.
ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm