ಬ್ರೇಕಿಂಗ್ ನ್ಯೂಸ್
01-10-22 01:21 pm Mangalore Correspondent ಕರಾವಳಿ
ಮಂಗಳೂರು, ಅ.1: ಸುರತ್ಕಲ್ ಜಂಕ್ಷನ್ ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರು ನಾಮಕರಣ ಮಾಡಬೇಕೆಂಬ ಶಾಸಕ ಭರತ್ ಶೆಟ್ಟಿ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ.
ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ ಹಿಂದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆಗೆ ಪ್ರಸ್ತಾವ ಮುಂದಿಡಲಾಗಿತ್ತು. 2021ರ ಆಗಸ್ಟ್ 3ರಂದು ನಡೆದ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಕಾಂಗ್ರೆಸ್ ಸದಸ್ಯ ವಿನಯರಾಜ್, ಎಸ್ಡಿಪಿಐ ಸದಸ್ಯರಾದ ಮುನೀಬ್ ಬೆಂಗ್ರೆ ಮತ್ತು ಶಂಶದ್ ಅಬುಬಕ್ಕರ್ ವಿರೋಧಿಸಿದ್ದರು. ಆನಂತರ, ಪ್ರಸ್ತಾಪವು ಸ್ಥಾಯಿ ಸಮಿತಿಯಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಬಂದಿತ್ತು.
ಇತ್ತೀಚೆಗೆ ಹೊಸತಾಗಿ ಮೇಯರ್ ಆಯ್ಕೆಯಾದ ಬಳಿಕ ಸೆ.30ರಂದು ಮೊದಲ ಬಾರಿಗೆ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಇದೇ ವೇಳೆ, ಮಹಾನಗರ ಪಾಲಿಕೆಯ ಆಡಳಿತ ಸುರತ್ಕಲ್ ಜಂಕ್ಷನ್ನಿಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ಅಂಗೀಕರಿಸಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಿರ್ಣಯ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಪತ್ರಿಕೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆಕ್ಷೇಪ ಮತ್ತು ಸಲಹೆಗಳನ್ನು ಸ್ವೀಕರಿಸಲಿದೆ.
ಇತ್ತೀಚೆಗೆ ಆಗಸ್ಟ್ 14ರಂದು ಸುರತ್ಕಲ್ ಜಂಕ್ಷನ್ನ ಮೇಲ್ಸೇತುವೆ ಅಡಿಭಾಗದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದು ಕೆಲವರ ಆಕ್ಷೇಪಕ್ಕೆ ಗುರಿಯಾಗಿತ್ತು. ಕೊನೆಗೆ, ಫ್ಲೆಕ್ಸನ್ನು ಸುರತ್ಕಲ್ ಪೊಲೀಸರು ತೆರವು ಮಾಡಿದ್ದರು.
The proposal of renaming Suratkal Junction as Veer Savarkar junction was accepted in the general meeting of Mangaluru City Corporation (MCC) on Friday September 30.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am