ಬ್ರೇಕಿಂಗ್ ನ್ಯೂಸ್
03-10-22 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.3: ಟ್ರಾಫಿಕ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಮತ್ತು ಅದರ ಅಪ್ರಾಪ್ತ ಚಾಲಕನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ ಮೂಲದ 17 ರ ಹರೆಯದ ಅಪ್ರಾಪ್ತ ಯುವಕ ಆರೋಪಿಯಾಗಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಲೋಕೇಶ್ ನಾಯ್ಕ್ ಅವರು ಎಎಸ್ಐ ಮಂಜುಳಾ ಜೊತೆ ನಿನ್ನೆ ಸಂಜೆ ಉಳ್ಳಾಲಬೈಲಿನಲ್ಲಿ ಕರ್ತವ್ಯದಲ್ಲಿದ್ದಾಗ ಘಟನೆ ನಡೆದಿತ್ತು.


ತೊಕ್ಕೊಟ್ಟಿನಿಂದ ಉಳ್ಳಾಲ ಕಡೆಗೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಗಸ್ತಿನಲ್ಲಿದ್ದ ಲೋಕೇಶ್ ಅವರು ತಪಾಸಣೆಗಾಗಿ ಬದಿಗೆ ನಿಲ್ಲಿಸುವಂತೆ ಸೂಚಿಸಿದ್ದರು. ಕಾರನ್ನ ಬದಿಗೆ ನಿಲ್ಲಿಸಲು ಮುಂದಾಗಿದ್ದ ಅಪ್ರಾಪ್ತ ಚಾಲಕ ಏಕಾಏಕಿ ಮುಂದಕ್ಕೆ ಚಲಾಯಿಸಿ ಲೋಕೇಶ್ ಅವರಿಗೆ ಡಿಕ್ಕಿಯಾಗಿಸಿ ಪರಾರಿಯಾಗಿದ್ದ. ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆಯ ವಿಭಜಕಕ್ಕೆ ಎಸೆಯಲ್ಪಟ್ಟ ಲೋಕೇಶ್ ಅವರು ತಲೆಗೆ ಗಂಭೀರ ಗಾಯಗೊಂಡು ನಗರದ ಎ.ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಹಿಟ್ & ರನ್ ಪ್ರಕರಣ ದಾಖಲಿಸಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ನಿನ್ನೆ ರಾತ್ರಿಯೇ ಘಟನೆಗೆ ಕಾರಣವಾದ ಕಾರನ್ನ ವಶಕ್ಕೆ ಪಡೆದಿದ್ದು, ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಚಾಲಕನನ್ನ ಸೋಮವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಚಾಲಕ ತನ್ನ ತಂದೆಯ ಕಾರನ್ನ ಚಾಲನಾ ಪರವಾನಿಗೆ ಇಲ್ಲದೆ ಚಲಾಯಿಸುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Ullal hit and run accident of traffic police constable, car driver minor boy who rammed over the constable and escaped the spot is now arrested by Ullal police in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm