ಬ್ರೇಕಿಂಗ್ ನ್ಯೂಸ್
04-10-22 03:04 pm Mangalore Correspondent ಕರಾವಳಿ
ಮಂಗಳೂರು, ಅ.4: ಪರೇಶ್ ಮೆಸ್ತಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಿ ರಿಪೋರ್ಟ್ ಹಾಕಿದ್ದಾರೆ. ಇದರೊಂದಿಗೆ ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತದೆ ಎಂಬುದು ಸಾಬೀತಾಗಿದೆ. ಸಾವಿನ ಮನೆಯನ್ನು ಚುನಾವಣಾ ಲಾಭಕ್ಕೆ ಬಳಸಿಕೊಳ್ಳುವುದು ಬಿಜೆಪಿ ಚಾಳಿಯಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ, ಕಾಂಗ್ರೆಸ್ ಮುಖಂಡ ಯುಟಿ ಖಾದರ್ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಬಡ ಕುಟುಂಬದ ಮನೆಯ ಸಂಕಷ್ಟವನ್ನು ಬೀದಿಗೆ ತಂದು ರಾಜಕೀಯ ಮಾಡುವುದು ಬಿಜೆಪಿ ಚಾಳಿ. ಸಿಬಿಐ ಈಗ ರಿಪೋರ್ಟ್ ಕೊಟ್ಟಿದ್ದು ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಎಲ್ಲಿ ಹೋಗಿದ್ದಾರೆ. ರಾಜಕೀಯ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಸಾವನ್ನು ರಾಜಕೀಯವಾಗಿ ಬಳಸುವುದು ಬಿಜೆಪಿಯ ಚುನಾವಣಾ ತಂತ್ರಗಾರಿಕೆ. ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಹಿಂದಿನ ಕಾಂಗ್ರೆಸ್ ಸರಕಾರ. ಬಾವಿಯಲ್ಲಿ ಶವ ಪತ್ತೆಯಾಗಿದ್ದ ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪ ಮಾಡಿದ್ದರು. ಜನರನ್ನು ರೊಚ್ಚಿಗೆಬ್ಬಿಸಿ ಪೊಲೀಸ್ ವಾಹನಗಳಿಗೆ ಬೆಂಕಿ ಇಡುವಂತೆ ಪ್ರೇರೇಪಿಸಿದ್ದರು. ಪರೇಶ್ ಮೇಸ್ತಾ ಸಾವಿನ ಬಳಿಕ ಬಿಜೆಪಿ ಮುಖಂಡರು ಆತನ ಮನೆಗೆ ಸರಣಿಯಂತೆ ಭೇಟಿ ಕೊಟ್ಟು ಪ್ರವಾಸಿ ತಾಣ ಆಗಿಸಿದ್ದರು. ಇಲ್ಲ ಸಲ್ಲದ ಆರೋಪ, ಹೇಳಿಕೆ ನೀಡಿ ಅಧಿಕಾರಕ್ಕೆ ಬಂದ ಬಳಿಕ ಪರೇಶ್ ಮೇಸ್ತಾನ ಬಡ ಕುಟುಂಬವನ್ನು ಬಿಜೆಪಿ ನಾಯಕರು ಮರೆತಿದ್ದರು. ತಮ್ಮ ರಾಜಕೀಯ ಲಾಭಕ್ಕೆ ಬಳಸಿ ನಂತರ ಮರೆಯುವುದು ಬಿಜೆಪಿ ಮುಖಂಡರದ್ದು ಹಳೆ ಚಾಳಿ.
ಅಧಿಕಾರಕ್ಕೆ ಬಂದ ಬಳಿಕ ಒಬ್ಬ ಶಾಸಕನಾಗಲಿ, ಸಚಿವನಾಗಲಿ, ಸಂಸದರಾಗಲಿ ಮೇಸ್ತಾ ಮನೆಗೆ ಭೇಟಿ ನೀಡಿಲ್ಲ. ಸಂಕಷ್ಟದಲ್ಲಿದ್ದ ಮೇಸ್ತಾ ಕುಟುಂಬಕ್ಕೆ ಆರ್ಥಿಕ ಸಹಾಯವನ್ನೂ ಮಾಡಿಲ್ಲ. ಪ್ರತಿ ಸಾವಿನಲ್ಲಿ ರಾಜಕೀಯ ಮಾಡುವುದು ಬಿಜೆಪಿ ಬೆಳೆಸಿಕೊಂಡು ಬಂದ ಚಾಳಿ. ಇನ್ನು ಐದಾರು ತಿಂಗಳಲ್ಲಿ ಚುನಾವಣೆ ಬರಲಿದೆ. ಈ ರೀತಿಯ ಸಾವಿನ ರಾಜಕೀಯ ನಡೆಸುವ ಪ್ರಯತ್ನ ಬಿಜೆಪಿಗರಿಂದ ಮುಂದುವರಿಯಲಿದೆ. ಜನರು ಬಿಜೆಪಿ ನಾಯಕರ ರಾಜಕೀಯದ ಬಗ್ಗೆ ಗಂಭೀರ ಯೋಚಿಸ ಬೇಕಾಗಿದೆ. ಚುನಾವಣಾ ಸಂದರ್ಭದಲ್ಲಿ ಇವರ ರಾಜಕೀಯ ತೆವಲುಗಳ ಬಗ್ಗೆ ಜನರು ಜಾಗೃತರಾಗ ಬೇಕಾಗಿದೆ ಎಂದು ಯು.ಟಿ ಖಾದರ್ ಹೇಳಿದ್ದಾರೆ.
Bjp has played dirty game even in the death of Paresh Mesta slams UT Khader in Mangalore. Despite preliminary reports suggesting that Paresh Mesta, 18, died of accidental drowning, the death was projected by the BJP as the communal murder of a Sangh Parivar worker by a Muslim gang.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm