ಬ್ರೇಕಿಂಗ್ ನ್ಯೂಸ್
05-10-22 11:01 pm Mangalore Correspondent ಕರಾವಳಿ
ಮಂಗಳೂರು, ಅ.5 : ಎರಡು ವರ್ಷಗಳಲ್ಲಿ ಕೊರೊನಾ ಇದ್ದ ಕಾರಣವೋ ಏನೋ.. ಈ ಬಾರಿ ಮಂಗಳೂರು ದಸರಾಕ್ಕೆ ಸಂಜೆಯಾಗುತ್ತಲೇ ಕಾಲಿಡಲು ಜಾಗ ಇರಲಿಲ್ಲ. ಅದ್ದೂರಿತನಕ್ಕೆ ಮತ್ತೊಂದು ಹೆಸರು ಎನ್ನುವಂತೆ ನಡೆದುಬಂದ ಮಂಗಳೂರು ದಸರಾಕ್ಕೆ ಈ ಬಾರಿ ಎಣೆಯೇ ಇರಲಿಲ್ಲ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ನವದುರ್ಗೆಯರು ಮತ್ತು ಶಾರದೆ, ಗಣಪತಿಯ ವಿಗ್ರಹದ ಮೆರವಣಿಗೆ ವಿಜಯದಶಮಿಯ ದಿನ ಎಂದಿನಂತೆ ಅದ್ದೂರಿಯಾಗಿ ನಡೆಯಿತು. ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ ಐದು ಗಂಟೆ ವೇಳೆಗೆ ಮೆರವಣಿಗೆ ಆರಂಭಗೊಂಡರೂ, ಶೋಭಾಯಾತ್ರೆಗೆ ಸ್ತಬ್ಧಚಿತ್ರಗಳು ಸಾಥ್ ನೀಡಲಿಲ್ಲ. ಈ ಹಿಂದೆಲ್ಲ ನವದುರ್ಗೆಯರ ಮೆರವಣಿಗೆಗೂ ಮುಂದಿನಿಂದ ಇತರೇ ಸ್ತಬ್ಧಚಿತ್ರಗಳು ಸಾಗಿ ಬರುತ್ತಿದ್ದವು. ಮಣ್ಣಗುಡ್ಡ, ಲೇಡಿಹಿಲ್ ನಲ್ಲಿ ಮೆರವಣಿಗೆ ಸೇರುತ್ತಿದ್ದ ಸ್ತಬ್ಧಚಿತ್ರಗಳು ಈ ಬಾರಿ ದೇವರ ವಿಗ್ರಹದ ಮುಂದಿನಿಂದ ಸಾಗಿ ಬರಲಿಲ್ಲ.












ಸಾವಿರಾರು ಜನರು ಸಂಜೆಯೇ ಲಾಲ್ ಬಾಗ್, ಬಳ್ಳಾಲ್ ಬಾಗ್ ನಲ್ಲಿ ಬಂದು ನಿಂತಿದ್ದರೂ ರಾತ್ರಿ ಹತ್ತುವರೆ ಕಳೆದರೂ ಮೆರವಣಿಗೆ ಲಾಲ್ ಬಾಗ್ ಬಂದು ತಲುಪಲಿಲ್ಲ. ಹೀಗಾಗಿ ಜನರು ಕಾದು ನಿರಾಶೆಯಾಗಿದ್ದರು. ಶಾರದೆಯ ಜೊತೆಗೆ ಸಾಗಬೇಕೆಂಬ ಕೆಲವು ತಂಡಗಳ ಧಾವಂತ, ಕೆಲವರ ಪ್ರತಿಷ್ಠೆಗಳು ಮೇಳೈಸಿದ ಕಾರಣ ಜನರು ರಾತ್ರಿಯಾದರೂ ಸ್ತಬ್ಧಚಿತ್ರಗಳು ನೋಡಲು ಸಿಗಲಿಲ್ಲ. ಹತ್ತು ಗಂಟೆ ವೇಳೆಗೆ ಲೇಡಿಹಿಲ್, ಲಾಲ್ ಬಾಗ್ ವೃತ್ತದಿಂದ ಬಳ್ಳಾಲ್ ಬಾಗ್ ಪಿವಿಸ್ ಉದ್ದಕ್ಕೆ ಲಕ್ಷಾಂತರ ಜನರು ಸೇರಿದ್ದರು. ಇದೇ ಮೊದಲ ಬಾರಿಗೆ ಎನ್ನುವಂತೆ ಈ ಪರಿ ಜನರು ಸೇರಿದ್ದರು.




ಸ್ಥಳೀಯರಲ್ಲದೆ, ಹೊರ ರಾಜ್ಯಗಳ ಕಾರ್ಮಿಕರು, ಉತ್ತರ ಭಾರತದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ದಸರಾ ಶೋಭಾಯಾತ್ರೆಗೆ ಎಂದಿನ ವೈಭವ ಇರಲಿಲ್ಲ. ಹೀಗಾಗಿ ಜನರು ಮೈಸೂರು ದಸರಾಕ್ಕಿಂತಲೂ ಹೆಚ್ಚೆಂಬಂತೆ ಸೇರಿದ್ದರು.
Kudroli Dasara in Mangalore, lakhs of people gather for celebration.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm