ಬ್ರೇಕಿಂಗ್ ನ್ಯೂಸ್
05-10-22 11:01 pm Mangalore Correspondent ಕರಾವಳಿ
ಮಂಗಳೂರು, ಅ.5 : ಎರಡು ವರ್ಷಗಳಲ್ಲಿ ಕೊರೊನಾ ಇದ್ದ ಕಾರಣವೋ ಏನೋ.. ಈ ಬಾರಿ ಮಂಗಳೂರು ದಸರಾಕ್ಕೆ ಸಂಜೆಯಾಗುತ್ತಲೇ ಕಾಲಿಡಲು ಜಾಗ ಇರಲಿಲ್ಲ. ಅದ್ದೂರಿತನಕ್ಕೆ ಮತ್ತೊಂದು ಹೆಸರು ಎನ್ನುವಂತೆ ನಡೆದುಬಂದ ಮಂಗಳೂರು ದಸರಾಕ್ಕೆ ಈ ಬಾರಿ ಎಣೆಯೇ ಇರಲಿಲ್ಲ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ನವದುರ್ಗೆಯರು ಮತ್ತು ಶಾರದೆ, ಗಣಪತಿಯ ವಿಗ್ರಹದ ಮೆರವಣಿಗೆ ವಿಜಯದಶಮಿಯ ದಿನ ಎಂದಿನಂತೆ ಅದ್ದೂರಿಯಾಗಿ ನಡೆಯಿತು. ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ ಐದು ಗಂಟೆ ವೇಳೆಗೆ ಮೆರವಣಿಗೆ ಆರಂಭಗೊಂಡರೂ, ಶೋಭಾಯಾತ್ರೆಗೆ ಸ್ತಬ್ಧಚಿತ್ರಗಳು ಸಾಥ್ ನೀಡಲಿಲ್ಲ. ಈ ಹಿಂದೆಲ್ಲ ನವದುರ್ಗೆಯರ ಮೆರವಣಿಗೆಗೂ ಮುಂದಿನಿಂದ ಇತರೇ ಸ್ತಬ್ಧಚಿತ್ರಗಳು ಸಾಗಿ ಬರುತ್ತಿದ್ದವು. ಮಣ್ಣಗುಡ್ಡ, ಲೇಡಿಹಿಲ್ ನಲ್ಲಿ ಮೆರವಣಿಗೆ ಸೇರುತ್ತಿದ್ದ ಸ್ತಬ್ಧಚಿತ್ರಗಳು ಈ ಬಾರಿ ದೇವರ ವಿಗ್ರಹದ ಮುಂದಿನಿಂದ ಸಾಗಿ ಬರಲಿಲ್ಲ.












ಸಾವಿರಾರು ಜನರು ಸಂಜೆಯೇ ಲಾಲ್ ಬಾಗ್, ಬಳ್ಳಾಲ್ ಬಾಗ್ ನಲ್ಲಿ ಬಂದು ನಿಂತಿದ್ದರೂ ರಾತ್ರಿ ಹತ್ತುವರೆ ಕಳೆದರೂ ಮೆರವಣಿಗೆ ಲಾಲ್ ಬಾಗ್ ಬಂದು ತಲುಪಲಿಲ್ಲ. ಹೀಗಾಗಿ ಜನರು ಕಾದು ನಿರಾಶೆಯಾಗಿದ್ದರು. ಶಾರದೆಯ ಜೊತೆಗೆ ಸಾಗಬೇಕೆಂಬ ಕೆಲವು ತಂಡಗಳ ಧಾವಂತ, ಕೆಲವರ ಪ್ರತಿಷ್ಠೆಗಳು ಮೇಳೈಸಿದ ಕಾರಣ ಜನರು ರಾತ್ರಿಯಾದರೂ ಸ್ತಬ್ಧಚಿತ್ರಗಳು ನೋಡಲು ಸಿಗಲಿಲ್ಲ. ಹತ್ತು ಗಂಟೆ ವೇಳೆಗೆ ಲೇಡಿಹಿಲ್, ಲಾಲ್ ಬಾಗ್ ವೃತ್ತದಿಂದ ಬಳ್ಳಾಲ್ ಬಾಗ್ ಪಿವಿಸ್ ಉದ್ದಕ್ಕೆ ಲಕ್ಷಾಂತರ ಜನರು ಸೇರಿದ್ದರು. ಇದೇ ಮೊದಲ ಬಾರಿಗೆ ಎನ್ನುವಂತೆ ಈ ಪರಿ ಜನರು ಸೇರಿದ್ದರು.




ಸ್ಥಳೀಯರಲ್ಲದೆ, ಹೊರ ರಾಜ್ಯಗಳ ಕಾರ್ಮಿಕರು, ಉತ್ತರ ಭಾರತದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ದಸರಾ ಶೋಭಾಯಾತ್ರೆಗೆ ಎಂದಿನ ವೈಭವ ಇರಲಿಲ್ಲ. ಹೀಗಾಗಿ ಜನರು ಮೈಸೂರು ದಸರಾಕ್ಕಿಂತಲೂ ಹೆಚ್ಚೆಂಬಂತೆ ಸೇರಿದ್ದರು.
Kudroli Dasara in Mangalore, lakhs of people gather for celebration.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am