ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm