ಬ್ರೇಕಿಂಗ್ ನ್ಯೂಸ್
08-10-22 05:13 pm Mangalore Correspondent ಕರಾವಳಿ
ಮಂಗಳೂರು, ಅ.8 : ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ ಚೀತಾ ಗರ್ಭಿಣಿಯಾದ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಪ್ ಮಾಡಿ ಮುಖಕ್ಕೆ ಚಿರತೆ ಮುಖವನ್ನು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಇವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ದೇಹಕ್ಕೆ ಚಿರತೆಯ ತಲೆ ಅಂಟಿಸಿ ವಿಕೃತವಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪ್ರಶ್ನೆ ಮಾಡಿದ್ದರು. ಇದು ಗರ್ಭಿಣಿ ಮಹಿಳೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಿದ್ದರು. ಬಂಧನ ಕ್ರಮಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು. ಶನಿವಾರ ಹಿರಿಯ ವಕೀಲ ಅರುಣ್ ಬಂಗೇರ ಬಂಧನ ಕ್ರಮವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಜಾಮೀನು ನೀಡುವಂತೆ ವಾದಿಸಿದ್ದಾರೆ. ಪೊಲೀಸರು ಮೂರು ದಿನ ಕಸ್ಟಡಿ ನೀಡಲು ಕೇಳಿಕೊಂಡಿದ್ದರು. ಆದರೆ ವಕೀಲರ ಮನವಿ ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಮನೆಯಿಂದ ಸುನೀಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಸುನಿಲ್ ವಿರುದ್ಧ ಉರ್ವಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 353 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bajpe police arrested social worker Sunil Bajilakeri on the accusation of insulting pregnant women using the face of a leopard. Sunil is accused of writing derogatory comments along with the post.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm