ಬ್ರೇಕಿಂಗ್ ನ್ಯೂಸ್
08-10-22 05:13 pm Mangalore Correspondent ಕರಾವಳಿ
ಮಂಗಳೂರು, ಅ.8 : ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ ಚೀತಾ ಗರ್ಭಿಣಿಯಾದ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಪ್ ಮಾಡಿ ಮುಖಕ್ಕೆ ಚಿರತೆ ಮುಖವನ್ನು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಇವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ದೇಹಕ್ಕೆ ಚಿರತೆಯ ತಲೆ ಅಂಟಿಸಿ ವಿಕೃತವಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪ್ರಶ್ನೆ ಮಾಡಿದ್ದರು. ಇದು ಗರ್ಭಿಣಿ ಮಹಿಳೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಿದ್ದರು. ಬಂಧನ ಕ್ರಮಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು. ಶನಿವಾರ ಹಿರಿಯ ವಕೀಲ ಅರುಣ್ ಬಂಗೇರ ಬಂಧನ ಕ್ರಮವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಜಾಮೀನು ನೀಡುವಂತೆ ವಾದಿಸಿದ್ದಾರೆ. ಪೊಲೀಸರು ಮೂರು ದಿನ ಕಸ್ಟಡಿ ನೀಡಲು ಕೇಳಿಕೊಂಡಿದ್ದರು. ಆದರೆ ವಕೀಲರ ಮನವಿ ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಮನೆಯಿಂದ ಸುನೀಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಸುನಿಲ್ ವಿರುದ್ಧ ಉರ್ವಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 353 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bajpe police arrested social worker Sunil Bajilakeri on the accusation of insulting pregnant women using the face of a leopard. Sunil is accused of writing derogatory comments along with the post.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am