ಬ್ರೇಕಿಂಗ್ ನ್ಯೂಸ್
08-10-22 05:13 pm Mangalore Correspondent ಕರಾವಳಿ
ಮಂಗಳೂರು, ಅ.8 : ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ ಚೀತಾ ಗರ್ಭಿಣಿಯಾದ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಪ್ ಮಾಡಿ ಮುಖಕ್ಕೆ ಚಿರತೆ ಮುಖವನ್ನು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಇವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ದೇಹಕ್ಕೆ ಚಿರತೆಯ ತಲೆ ಅಂಟಿಸಿ ವಿಕೃತವಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪ್ರಶ್ನೆ ಮಾಡಿದ್ದರು. ಇದು ಗರ್ಭಿಣಿ ಮಹಿಳೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಿದ್ದರು. ಬಂಧನ ಕ್ರಮಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು. ಶನಿವಾರ ಹಿರಿಯ ವಕೀಲ ಅರುಣ್ ಬಂಗೇರ ಬಂಧನ ಕ್ರಮವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಜಾಮೀನು ನೀಡುವಂತೆ ವಾದಿಸಿದ್ದಾರೆ. ಪೊಲೀಸರು ಮೂರು ದಿನ ಕಸ್ಟಡಿ ನೀಡಲು ಕೇಳಿಕೊಂಡಿದ್ದರು. ಆದರೆ ವಕೀಲರ ಮನವಿ ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಮನೆಯಿಂದ ಸುನೀಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಸುನಿಲ್ ವಿರುದ್ಧ ಉರ್ವಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 353 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bajpe police arrested social worker Sunil Bajilakeri on the accusation of insulting pregnant women using the face of a leopard. Sunil is accused of writing derogatory comments along with the post.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm