ಬ್ರೇಕಿಂಗ್ ನ್ಯೂಸ್
08-10-22 05:13 pm Mangalore Correspondent ಕರಾವಳಿ
ಮಂಗಳೂರು, ಅ.8 : ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ ಚೀತಾ ಗರ್ಭಿಣಿಯಾದ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಪ್ ಮಾಡಿ ಮುಖಕ್ಕೆ ಚಿರತೆ ಮುಖವನ್ನು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಇವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ದೇಹಕ್ಕೆ ಚಿರತೆಯ ತಲೆ ಅಂಟಿಸಿ ವಿಕೃತವಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ‘ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪ್ರಶ್ನೆ ಮಾಡಿದ್ದರು. ಇದು ಗರ್ಭಿಣಿ ಮಹಿಳೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಿದ್ದರು. ಬಂಧನ ಕ್ರಮಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು. ಶನಿವಾರ ಹಿರಿಯ ವಕೀಲ ಅರುಣ್ ಬಂಗೇರ ಬಂಧನ ಕ್ರಮವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಜಾಮೀನು ನೀಡುವಂತೆ ವಾದಿಸಿದ್ದಾರೆ. ಪೊಲೀಸರು ಮೂರು ದಿನ ಕಸ್ಟಡಿ ನೀಡಲು ಕೇಳಿಕೊಂಡಿದ್ದರು. ಆದರೆ ವಕೀಲರ ಮನವಿ ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಮನೆಯಿಂದ ಸುನೀಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಸುನಿಲ್ ವಿರುದ್ಧ ಉರ್ವಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 353 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bajpe police arrested social worker Sunil Bajilakeri on the accusation of insulting pregnant women using the face of a leopard. Sunil is accused of writing derogatory comments along with the post.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am