ಬ್ರೇಕಿಂಗ್ ನ್ಯೂಸ್
09-10-22 06:21 pm Mangalore Correspondent ಕರಾವಳಿ
ಉಳ್ಳಾಲ, ಅ.9 : ಕಳೆದ ಸೆ.26 ರಂದು ಉಳ್ಳಾಲದ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ಪತ್ತೆಯಾಗಿತ್ತು. ಮೂರು ದಿವಸಗಳ ಬಳಿಕ ಶವದ ಗುರುತು ಪತ್ತೆಯಾಗದೆ ಕೋಸ್ಟ್ ಗಾರ್ಡ್ ಪೊಲೀಸರು ಮೃತದೇಹವನ್ನ ಹೂತು ದಫನ ಮಾಡಿದ್ದರು. ಇದೀಗ ಕುಟುಂಬಸ್ಥರು ಉಳ್ಳಾಲ ಠಾಣೆಯಲ್ಲಿ ದೂರು ನೀಡುತ್ತಿದ್ದಂತೆ ಶವದ ಗುರುತು ಪತ್ತೆಯಾಗಿದ್ದು ತನಿಖೆ ಆರಂಭಗೊಂಡಿದೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36)ಯಾನೆ ಜಾಕಿ ಮೃತ ವ್ಯಕ್ತಿ. ಝಾಕಿರ್ ವಿವಾಹಿತನಾಗಿದ್ದು ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದರರ ಜೊತೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ವ್ಯವಹಾರದಲ್ಲಿ ಕೈ ಸುಟ್ಟು ಕೊಂಡಿದ್ದನೆನ್ನಲಾಗಿದೆ. ಝಾಕಿರ್ ಇತ್ತೀಚೆಗೆ ಖಿನ್ನತೆಗೊಳಗಾಗಿದ್ದು ಕಳೆದ ಸೆ.26 ರಂದು ಮನೆಯಿಂದ ಹೊರ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಝಾಕಿರ್ ಚಲಾಯಿಸುತ್ತಿದ್ದ ಮೋಟಾರ್ ಬೈಕ್ ಮೊನ್ನೆ ಶುಕ್ರವಾರ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುವಾಗ ಝಾಕಿರ್ ಮೃತದೇಹ ಕುಂಬ್ಳೆಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.


ಕಳೆದ ಸೆ.28 ರಂದು ಕುಂಬ್ಳೆಯ ಆಳ ಸಮುದ್ರದಲ್ಲಿ ಝಾಕಿರ್ ಮೃತದೇಹ ಮೀನುಗಾರರಿಗೆ ದೊರಕಿತ್ತು. ಕೋಸ್ಟ್ ಗಾರ್ಡ್ ಪೊಲೀಸರು ಕೇಸು ದಾಖಲಿಸಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಕೊಳೆತಿದ್ದ ಮೃತದೇಹದ ಗುರುತು ಸಿಗದ ಕಾರಣ ಕೋಸ್ಟ್ ಗಾರ್ಡ್ ಪೊಲೀಸರು ಮೂರು ದಿವಸಗಳ ನಂತರ ಶವವನ್ನ ಹೂತು ದಫನಗೈದಿದ್ದಾರೆ.

ಈ ನಡುವೆ, ಝಾಕಿರ್ ಬೈಕ್ ಸೋಮೇಶ್ವರ ದೇವಸ್ಥಾನದ ಬಳಿ ದೊರಕಿದ್ದು ಆತ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕುಟುಂಬ ವರ್ಗದವರು ಮೃತ ಝಾಕಿರ್ ಮೃತದೇಹವನ್ನ ಮರಳಿ ತೆಗೆಸಿ, ಮನೆಗೆ ತರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಮೃತ ಝಾಕಿರ್ ಗೆ ಓರ್ವ ಪುತ್ರನಿದ್ದು, ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ.
Mangalore Ullal missing man body found in kumble beach in kerala, depression suspected. The deceased has been identified as Zakir from Pilar. Zakir was married recently and was helping his brother in fishing business.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am