ಬ್ರೇಕಿಂಗ್ ನ್ಯೂಸ್
10-10-20 01:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಈ ಬಗ್ಗೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.,ನಾಥ ಪರಂಪರೆ ಬಗ್ಗೆ ಸಮಾಜಕ್ಕೆ ಅಪಾರ ಗೌರವವಿದೆ. ಅಂತಹ ಉನ್ನತ ಪರಂಪರೆಯುಳ್ಳ ಪೂಜ್ಯರಾದ ಯೋಗಿ ಬಗ್ಗೆ ಮಿಥುನ್ ರೈ ಅವಹೇಳನ ಆಗುವ ರೀತಿ ಮಾತಾಡಿದ್ದಾರೆ. ಇದು ಮಿಥುನ್ ರೈ ಯೋಗ್ಯತೆಯನ್ನ ತೋರಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಬಾಯಿಗೆ ಬಂದ ರೀತಿ ಮಾತಾಡಲು ಕಾಂಗ್ರೆಸ್ನವರು ದಕ್ಷಿಣ ಕನ್ನಡ ಜಿಲ್ಲೆಯನ್ನ ಖರೀದಿಸಿಲ್ಲ. ಅತ್ಯಾಚಾರ ವಿಚಾರದ ಬಗ್ಗೆ ಪ್ರತಿಭಟನೆ ನಡೆಸುವುದಿದ್ದರೂ, ಕಾನೂನು ಮೇಲೆ ನಂಬಿಕೆ ಇರಲಿ. ಕಾನೂನು ಮೀರಿದ ವರ್ತನೆ ಸರಿಯಲ್ಲ. ಕಾನೂನು ಬಾಹಿರ ರೀತಿ ಪ್ರತಿಭಟನೆ ನಡೆಸುತ್ತಾರೆ. ಕಾನೂನು ಉಲ್ಲಂಘನೆ ಆಗುವ ರೀತಿ ಮಾತುಗಳನ್ನಾಡುತ್ತಾರೆ. ಅತ್ಯಾಚಾರ ವಿರೋಧಿಸಿ ಕಠಿಣ ಕಾನೂನು ಜಾರಿಗೆ ತಂದಿದ್ದು ಕೇಂದ್ರದ ಮೋದಿ ಸರ್ಕಾರ. ಇದು ಕಾಂಗ್ರೆಸಿನವರಿಗೆ ತಿಳಿದಿರಲಿ ಎಂದು ಸುದರ್ಶನ್ ಹೇಳಿದರು.
ಅಲ್ಲದೆ, ಕಾಂಗ್ರೆಸ್ ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶ ಇದೆ. ಕೇರಳದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಮೌನ ವಹಿಸುತ್ತದೆ. ಅದರ ಬಗ್ಗೆ ಮಾತನಾಡಲ್ಲ. ಯಾಕಂದ್ರೆ ಅಲ್ಲಿ ಇವರ ಮಿತ್ರರದ್ದೇ ಆಡಳಿತ ಇದೆ. ಬಿಜೆಪಿ ಉತ್ತರ ಪ್ರದೇಶದ ಅತ್ಯಾಚಾರ ಘಟನೆಯನ್ನೂ ಖಂಡಿಸುತ್ತದೆ. ಮಿಥುನ್ ರೈ ಹೇಳಿಕೆಯನ್ನೂ ಬಿಜೆಪಿ ಖಂಡಿಸುತ್ತದೆ. ಇಂತಹ ಹೇಳಿಕೆಯನ್ನ ಕಾಂಗ್ರೆಸ್ ನಾಯಕರು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಕಾರ್ಯಕರ್ತರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದು ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ; ಮಿಥುನ್ ರೈ
Dakshina Kannada Youth Congress president Mithun Rai had made offensive statements against UP CM Yogi affirming of throwing black ink during yogi visit to Mangalore for which District president Sudarshan has slammed Minthun rai over his culture.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm