ಬ್ರೇಕಿಂಗ್ ನ್ಯೂಸ್
09-10-22 10:11 pm Mangalore Correspondent ಕರಾವಳಿ
ಮಂಗಳೂರು, ಅ.9 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 100 ರೂ. ಹಣ ತೆತ್ತು ಭಕ್ತರು ಸೌಲಭ್ಯ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ತಿರುಪತಿ ಸೇರಿದಂತೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಹಣ ತೆತ್ತು ವಿಶೇಷ ದರ್ಶನದ ವ್ಯವಸ್ಥೆ ಇದೆ. ಆದರೆ ಕರಾವಳಿಯಲ್ಲಿ ಅಂತಹ ಪದ್ಧತಿ ಇರಲಿಲ್ಲ. ಇದೀಗ ಮೊದಲ ಬಾರಿಗೆ ಕಟೀಲಿನಲ್ಲಿ ಅಂತಹ ವ್ಯವಸ್ಥೆ ತರಲಾಗಿದೆ. ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು ಆಗಮಿಸುತ್ತಾರೆ. ಇದರ ಬೆನ್ನಲ್ಲೇ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಆಡಳಿತ ಕಮಿಟಿ ಪ್ರಕಟಣೆ ಹೊರಡಿಸಿದೆ.
ಇತ್ತೀಚೆಗೆ ಕಟೀಲಿನಲ್ಲಿ ವಾಹನ ಪಾರ್ಕಿಂಗ್ ಮೇಲೆ ದರ ವಿಧಿಸಲು ಆಡಳಿತ ಮಂಡಳಿ ತೀರ್ಮಾನಕ್ಕೆ ಬಂದಿತ್ತು. ಆದರೆ ಈ ರೀತಿಯ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆನಂತರ, ಪಾರ್ಕಿಂಗ್ ಶುಲ್ಕದ ನಿರ್ಧಾರವನ್ನು ಹಿಂಪಡೆಯಲಾಗಿತ್ತು. ಇದೀಗ ಭಕ್ತರಿಗೆ ವಿಶೇಷ ದರ್ಶನಕ್ಕಾಗಿ ಹೆಚ್ಚುವರಿ ಶುಲ್ಕದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಮೂಲಕ ಸಿರಿವಂತರಿಗೆ ಶೀಘ್ರ ದರ್ಶನ ವ್ಯವಸ್ಥೆಗೆ ಕಟೀಲು ದೇವಸ್ಥಾನ ತೆರೆದುಕೊಂಡಿದೆ. ಈವರೆಗೂ ಸಾವಿರಾರು ಭಕ್ತರು ಬಂದರೂ ಯಾವುದೇ ನೂಕುನುಗ್ಗಲು ಇಲ್ಲದೆ ಸಾಗಿ ಬರುತ್ತಿದ್ದ ವ್ಯವಸ್ಥೆಯಲ್ಲಿ ಆಡಳಿತ ಮಂಡಳಿ ಹಣ ತೆತ್ತು ಶೀಘ್ರ ದರ್ಶನದ ವ್ಯವಸ್ಥೆ ಮಾಡಿದೆ.
ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತದೆ. ಹೀಗಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ಸಾಧ್ಯವಾಗದವರು ಶೀಘ್ರ ದರ್ಶನದ ವ್ಯವಸ್ಥೆ ಪಡೆಯಬಹುದು ಎಂದು ಕ್ಷೇತ್ರದ ಆಡಳಿತ ಮಂಡಳಿ ಸಮರ್ಥನೆ ಮಾಡಿಕೊಂಡಿದೆ. ಈ ರೀತಿಯ ನಿರ್ಧಾರಕ್ಕೆ ಟೀಕೆಯೂ ಬಂದಿದ್ದು ಹಣ ಮಾಡುವುದಕ್ಕಾಗಿ ಇಂತಹ ನಿರ್ಧಾರಕ್ಕೆ ಬಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
Fast service implemented for darshan at Kateel Temple in Mangalore, 100 rupees charged.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am