ಬ್ರೇಕಿಂಗ್ ನ್ಯೂಸ್
09-10-22 10:11 pm Mangalore Correspondent ಕರಾವಳಿ
ಮಂಗಳೂರು, ಅ.9 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 100 ರೂ. ಹಣ ತೆತ್ತು ಭಕ್ತರು ಸೌಲಭ್ಯ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ತಿರುಪತಿ ಸೇರಿದಂತೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಹಣ ತೆತ್ತು ವಿಶೇಷ ದರ್ಶನದ ವ್ಯವಸ್ಥೆ ಇದೆ. ಆದರೆ ಕರಾವಳಿಯಲ್ಲಿ ಅಂತಹ ಪದ್ಧತಿ ಇರಲಿಲ್ಲ. ಇದೀಗ ಮೊದಲ ಬಾರಿಗೆ ಕಟೀಲಿನಲ್ಲಿ ಅಂತಹ ವ್ಯವಸ್ಥೆ ತರಲಾಗಿದೆ. ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು ಆಗಮಿಸುತ್ತಾರೆ. ಇದರ ಬೆನ್ನಲ್ಲೇ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಆಡಳಿತ ಕಮಿಟಿ ಪ್ರಕಟಣೆ ಹೊರಡಿಸಿದೆ.
ಇತ್ತೀಚೆಗೆ ಕಟೀಲಿನಲ್ಲಿ ವಾಹನ ಪಾರ್ಕಿಂಗ್ ಮೇಲೆ ದರ ವಿಧಿಸಲು ಆಡಳಿತ ಮಂಡಳಿ ತೀರ್ಮಾನಕ್ಕೆ ಬಂದಿತ್ತು. ಆದರೆ ಈ ರೀತಿಯ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆನಂತರ, ಪಾರ್ಕಿಂಗ್ ಶುಲ್ಕದ ನಿರ್ಧಾರವನ್ನು ಹಿಂಪಡೆಯಲಾಗಿತ್ತು. ಇದೀಗ ಭಕ್ತರಿಗೆ ವಿಶೇಷ ದರ್ಶನಕ್ಕಾಗಿ ಹೆಚ್ಚುವರಿ ಶುಲ್ಕದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಮೂಲಕ ಸಿರಿವಂತರಿಗೆ ಶೀಘ್ರ ದರ್ಶನ ವ್ಯವಸ್ಥೆಗೆ ಕಟೀಲು ದೇವಸ್ಥಾನ ತೆರೆದುಕೊಂಡಿದೆ. ಈವರೆಗೂ ಸಾವಿರಾರು ಭಕ್ತರು ಬಂದರೂ ಯಾವುದೇ ನೂಕುನುಗ್ಗಲು ಇಲ್ಲದೆ ಸಾಗಿ ಬರುತ್ತಿದ್ದ ವ್ಯವಸ್ಥೆಯಲ್ಲಿ ಆಡಳಿತ ಮಂಡಳಿ ಹಣ ತೆತ್ತು ಶೀಘ್ರ ದರ್ಶನದ ವ್ಯವಸ್ಥೆ ಮಾಡಿದೆ.
ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತದೆ. ಹೀಗಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ಸಾಧ್ಯವಾಗದವರು ಶೀಘ್ರ ದರ್ಶನದ ವ್ಯವಸ್ಥೆ ಪಡೆಯಬಹುದು ಎಂದು ಕ್ಷೇತ್ರದ ಆಡಳಿತ ಮಂಡಳಿ ಸಮರ್ಥನೆ ಮಾಡಿಕೊಂಡಿದೆ. ಈ ರೀತಿಯ ನಿರ್ಧಾರಕ್ಕೆ ಟೀಕೆಯೂ ಬಂದಿದ್ದು ಹಣ ಮಾಡುವುದಕ್ಕಾಗಿ ಇಂತಹ ನಿರ್ಧಾರಕ್ಕೆ ಬಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
Fast service implemented for darshan at Kateel Temple in Mangalore, 100 rupees charged.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm