ಬ್ರೇಕಿಂಗ್ ನ್ಯೂಸ್
09-10-22 10:11 pm Mangalore Correspondent ಕರಾವಳಿ
ಮಂಗಳೂರು, ಅ.9 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 100 ರೂ. ಹಣ ತೆತ್ತು ಭಕ್ತರು ಸೌಲಭ್ಯ ಪಡೆಯಬಹುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ತಿರುಪತಿ ಸೇರಿದಂತೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಹಣ ತೆತ್ತು ವಿಶೇಷ ದರ್ಶನದ ವ್ಯವಸ್ಥೆ ಇದೆ. ಆದರೆ ಕರಾವಳಿಯಲ್ಲಿ ಅಂತಹ ಪದ್ಧತಿ ಇರಲಿಲ್ಲ. ಇದೀಗ ಮೊದಲ ಬಾರಿಗೆ ಕಟೀಲಿನಲ್ಲಿ ಅಂತಹ ವ್ಯವಸ್ಥೆ ತರಲಾಗಿದೆ. ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು ಆಗಮಿಸುತ್ತಾರೆ. ಇದರ ಬೆನ್ನಲ್ಲೇ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಆಡಳಿತ ಕಮಿಟಿ ಪ್ರಕಟಣೆ ಹೊರಡಿಸಿದೆ.
ಇತ್ತೀಚೆಗೆ ಕಟೀಲಿನಲ್ಲಿ ವಾಹನ ಪಾರ್ಕಿಂಗ್ ಮೇಲೆ ದರ ವಿಧಿಸಲು ಆಡಳಿತ ಮಂಡಳಿ ತೀರ್ಮಾನಕ್ಕೆ ಬಂದಿತ್ತು. ಆದರೆ ಈ ರೀತಿಯ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆನಂತರ, ಪಾರ್ಕಿಂಗ್ ಶುಲ್ಕದ ನಿರ್ಧಾರವನ್ನು ಹಿಂಪಡೆಯಲಾಗಿತ್ತು. ಇದೀಗ ಭಕ್ತರಿಗೆ ವಿಶೇಷ ದರ್ಶನಕ್ಕಾಗಿ ಹೆಚ್ಚುವರಿ ಶುಲ್ಕದ ವ್ಯವಸ್ಥೆಯನ್ನು ಮಾಡಲಾಗಿದೆ. ಅದರ ಮೂಲಕ ಸಿರಿವಂತರಿಗೆ ಶೀಘ್ರ ದರ್ಶನ ವ್ಯವಸ್ಥೆಗೆ ಕಟೀಲು ದೇವಸ್ಥಾನ ತೆರೆದುಕೊಂಡಿದೆ. ಈವರೆಗೂ ಸಾವಿರಾರು ಭಕ್ತರು ಬಂದರೂ ಯಾವುದೇ ನೂಕುನುಗ್ಗಲು ಇಲ್ಲದೆ ಸಾಗಿ ಬರುತ್ತಿದ್ದ ವ್ಯವಸ್ಥೆಯಲ್ಲಿ ಆಡಳಿತ ಮಂಡಳಿ ಹಣ ತೆತ್ತು ಶೀಘ್ರ ದರ್ಶನದ ವ್ಯವಸ್ಥೆ ಮಾಡಿದೆ.
ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತದೆ. ಹೀಗಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯಲು ಸಾಧ್ಯವಾಗದವರು ಶೀಘ್ರ ದರ್ಶನದ ವ್ಯವಸ್ಥೆ ಪಡೆಯಬಹುದು ಎಂದು ಕ್ಷೇತ್ರದ ಆಡಳಿತ ಮಂಡಳಿ ಸಮರ್ಥನೆ ಮಾಡಿಕೊಂಡಿದೆ. ಈ ರೀತಿಯ ನಿರ್ಧಾರಕ್ಕೆ ಟೀಕೆಯೂ ಬಂದಿದ್ದು ಹಣ ಮಾಡುವುದಕ್ಕಾಗಿ ಇಂತಹ ನಿರ್ಧಾರಕ್ಕೆ ಬಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
Fast service implemented for darshan at Kateel Temple in Mangalore, 100 rupees charged.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm