ಬ್ರೇಕಿಂಗ್ ನ್ಯೂಸ್
10-10-20 01:56 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಕರಾವಳಿಯಲ್ಲಿ ಜಾತ್ರೆಗಳಂದ್ರೆ ಜನರಿಗೆ ಗೌಜಿ. ಡಿಸೆಂಬರ್ ನಿಂದ ಮೇ ತಿಂಗಳ ವರೆಗೆ ದೇವಸ್ಥಾನ, ದೈವಸ್ಥಾನಗಳಲ್ಲಿ ಜಾತ್ರೆಗಳದ್ದೇ ಅಬ್ಬರ. ಆದರೆ ಕಳೆದ ಬಾರಿ ಕೊರೊನಾ ಲಾಕ್ಡೌನ್ ಎಲ್ಲ ಉತ್ಸವಗಳಿಗೂ ಬ್ರೇಕ್ ಹಾಕಿತ್ತು. ಹೀಗೆ ಜಾತ್ರೆಗಳಿಗೆ ಬ್ರೇಕ್ ಬಿದ್ದಿರುವುದು ಇಲ್ಲೊಂದು ಉತ್ತರ ಕರ್ನಾಟಕ ಮೂಲದ ಕುಟುಂಬವನ್ನು ಬೀದಿಪಾಲು ಮಾಡಿದೆ.
ವಿಜಯಪುರ ಮೂಲದ 14 ಜನರ ಕುಟುಂಬ ಮಂಗಳೂರು ಹೊರವಲಯದ ಬಜ್ಪೆಯ ಪಡುಪೆರಾರದಲ್ಲಿ ಬೀಡು ಬಿಟ್ಟಿದ್ದು, ಊಟಕ್ಕೂ ಗತಿಯಿಲ್ಲದೆ ಪರದಾಡುವಂತಾಗಿದೆ. ಇಂಡಿ ತಾಲೂಕಿನ ಹಲ್ಲಳ್ಲಿ ನಿವಾಸಿಗಳಾದ ಎರಡು ಕುಟುಂಬಗಳಲ್ಲಿ ಗಂಡಸರು, ಮಹಿಳೆಯರು ಮತ್ತು ನಾಲ್ವರು ಮಕ್ಕಳಿದ್ದು ಒಟ್ಟು 13 ಮಂದಿ ಇದ್ದಾರೆ. ಜಾತ್ರೆ, ಉತ್ಸವಗಳಲ್ಲಿ ರಾಟೆ ತೊಟ್ಟಿಲು, ಡ್ರ್ಯಾಗನ್ ರೈಲು, ಕುದುರೆ ಹೀಗೆ ಮಕ್ಕಳ ಮನೋರಂಜನೆಯ ಆಟಗಳನ್ನು ಆಡಿಸುವುದು, ಅದರಿಂದ ಹಣ ಸಂಗ್ರಹಿಸುವುದು ಇವರ ಕೆಲಸ. ಆಟದ ಸಾಮಾನುಗಳನ್ನು ಇಟ್ಕೊಂಡು ಊರಿಂದೂರಿಗೆ ತಿರುಗಾಡುವ ಇವರಿಗೆ ಇದೇ ಆದಾಯದ ಮೂಲ. ಪ್ರತಿ ಬಾರಿ ಜನವರಿ ತಿಂಗಳಲ್ಲಿ ಕರಾವಳಿಗೆ ಬರುವ ಇವರು ನಾಲ್ಕು ತಿಂಗಳಲ್ಲಿ ಲಕ್ಷಾಂತರ ದುಡಿದು ಮರಳುತ್ತಾರೆ. ಆದರೆ, ಈ ಬಾರಿ ಫೆಬ್ರವರಿ ವೇಳೆಗೆ ಬಜ್ಪೆಯ ಪಡುಪೆರಾರದ ಪೆರಾರ ಜಾತ್ರೆಗೆ ಬಂದವರಿಗೆ ಲಾಕ್ಡೌನ್ ಕಟ್ಟಿಹಾಕಿದೆ. ಅತ್ತ ಊರಿಗೆ ಮರಳುವಂತೆಯೂ ಇಲ್ಲ. ಇಲ್ಲೇ ಉಳಿಯುವಂತೆಯೂ ಇಲ್ಲದ ಸ್ಥಿತಿ.




ರಾಟೆ, ತೊಟ್ಟಿಲು, ಡ್ರ್ಯಾಗನ್ ರೈಲಿನ ಸಾಮಗ್ರಿಗಳು ಮಳೆ, ಬಿಸಿಲಿಗೆ ತುಕ್ಕು ಹಿಡಿದಿದೆ. ಎಲ್ಲವನ್ನೂ ಪಡು ಪೆರಾರ ಗ್ರಾಮ ಪಂಚಾಯತ್ ಮುಂದಿನ ಬಯಲಲ್ಲಿ ರಾಶಿ ಹಾಕಿರುವ ಈ ಕುಟುಂಬಗಳು ಡೇರೆ ಹಾಕ್ಕೊಂಡು ಜೀವನ ಕಳೆಯುತ್ತಿದ್ದಾರೆ. ಕೈಯಲ್ಲಿದ್ದ ಹಣ ಮುಗಿದಿದ್ದು, ಊರವರೇ ಸೇರಿ ಊಟ, ತಿಂಡಿಗೆ ಸಹಾಯ ನೀಡುತ್ತಿದ್ದಾರೆ. ಕಳೆದ ಬಾರಿ ಮೂರು ಲಕ್ಷ ರೂಪಾಯಿ ಸಾಲ ಪಡೆದು ಆಟದ ಸಾಮಗ್ರಿಗಳನ್ನು ಪಡೆದು ಬಂದಿದ್ದೆವು. ಈಗ ಸಾಲ ಕಟ್ಟದೆ ಅದರ ಮೊತ್ತ ಏಳು ಲಕ್ಷ ರೂಪಾಯಿ ಆಗಿದೆ. ಇಲ್ಲಿಂದ ಹೋಗುವುದಕ್ಕೂ ಆಗಲ್ಲ. ಸಾಮಗ್ರಿಗಳನ್ನು ತುಂಬ್ಕೊಂಡು ಹೋಗಲು ಮೂರು ಲಾರಿಯಷ್ಟಿದೆ. ಊರಿಗೆ ಹೋಗುವುದಿದ್ದರೆ ಒಮ್ಮೆಗೆ 30 ಸಾವಿರ ರೂಪಾಯಿ ಬಾಡಿಗೆ ಹೇಳುತ್ತಾರೆ. ಮೂರು ಬಾರಿ ತುಂಬ್ಕೊಂಡು ಹೋಗಲು 90 ಸಾವಿರ ರೂ. ಬೇಕು. ಈಗ ಊಟಕ್ಕೇ ಗತಿಯಿಲ್ಲ. ಏನು ಮಾಡುವುದು ತೋಚುವುದಿಲ್ಲ ಎನ್ನುತ್ತಾರೆ, ಸಂತ್ರಸ್ತ ಕುಟುಂಬದ ಮಹಿಳೆ ಅಕ್ಕುಬಾಯಿ.
ಇಲ್ಲಿ ಆಸುಪಾಸಿನವರು ಸಹಾಯ ಮಾಡುತ್ತಿದ್ದಾರೆ. ಇಲ್ಲಿನ ತರಕಾರಿ ಅಂಗಡಿಯವರು ವಾರಕ್ಕೊಮ್ಮೆ ತರಕಾರಿ ಕೊಡುತ್ತಾರೆ. ಇನ್ನೊಬ್ಬರು ಜೀನಸು ಸಾಮಾನು ಕೊಡುತ್ತಾರೆ. ಗಂಡಸರು ಒಂದಷ್ಟು ಕೂಲಿ ಮಾಡ್ಕೊಂಡಿದ್ದಾರೆ. ಇನ್ನಾದ್ರೂ ಜಾತ್ರೆ ಸುರು ಆಗತ್ತಾ ನೋಡಬೇಕ್ರೀ ಎನ್ನುತ್ತಾರೆ, ಇನ್ನೊಬ್ಬ ಮಹಿಳೆ.
ಕರಾವಳಿಯಲ್ಲಿ ಮತ್ತೆ ಜಾತ್ರೆ ಸುರು ಆಗೋ ಸಮಯ ಬಂತು. ಹೀಗಾಗಿ ಇವ್ರಿಗೆ ಜಾತ್ರೆ ಸುರುವಾದ್ರೆ ಆಟ ಮತ್ತೆ ಶುರು ಮಾಡಬಹುದು ಅನ್ನೋ ಆಸೆ ಇದೆ. ಆದರೆ, ಕೊರೊನಾ ನಿರ್ಬಂಧದಿಂದಾಗಿ ನವರಾತ್ರಿ ಸಂದರ್ಭವೂ ಅಂಗಡಿ ಹಾಕುವಂತಿಲ್ಲ. ಆಟಿಕೆ ಮಾರುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಒಟ್ನಲ್ಲಿ ಈ ಕುಟುಂಬದ ಸ್ಥಿತಿ ಮೂರಾಬಟ್ಟೆಯಾಗಿದೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm